ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತಿಥಿ ಕಾರ್ಯಕ್ಕೆ ಶಿವಮೊಗ್ಗಕ್ಕೆ ಬಂದಿದ್ದವರು ಈಗ ಕ್ವಾರಂಟೈನ್ಗೆ ಒಳಗಾಗುವಂತೆ ಆಗಿದೆ. ನಗರದ ರವಿ ವರ್ಮ ಬೀದಿಯಲ್ಲಿ ವ್ಯಕ್ತಿಯೊಬ್ಬರ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಬಂದಿದ್ದ ಸಂಬಂಧಿಗಳು ಈಗ ಕ್ವಾಂಟೈನ್ಗೆ ಒಳಗಾಗಿದ್ದಾರೆ.

ರವಿ ವರ್ಮ ಬೀದಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಕೆಲವರು ಬಂದಿರುವ ಬಗ್ಗೆ ಸ್ಥಳೀಯರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು ಕರೋನ ಪರೀಕ್ಷೆ ನಡೆಸಿ, ಕ್ವಾರಂಟೈನ್ಗೆ ಒಳಗಾಗುವಂತೆ ಸೂಚಿಸಿದರು. ಮಂಗಳೂರಿನಿಂದ ಬಂದಿದ್ದವರು ಹೋಂ ಕ್ವಾರಂಟೈನ್ ಆಗುತ್ತೇವೆ ಎಂದು ಮನವಿ ಮಾಡಿದರು. ಆದರೆ ಸ್ಥಳೀಯರು ಇವರನ್ನು ರವಿ ವರ್ಮ ಬೀದಿಯ ಮನೆಯಲ್ಲಿ ಕ್ವಾರಂಟೈನ್ ಮಾಡಲು ವಿರೋಧ ವ್ಯಕ್ತಪಡಿಸಿದರು. ಹಾಗಾಗಿ ಸರ್ಕಾರದ ವ್ಯವಸ್ಥೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

About The Editor
ನಿತಿನ್ ಆರ್.ಕೈದೊಟ್ಲು






