ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020
ತಿಥಿ ಕಾರ್ಯಕ್ಕೆ ಶಿವಮೊಗ್ಗಕ್ಕೆ ಬಂದಿದ್ದವರು ಈಗ ಕ್ವಾರಂಟೈನ್ಗೆ ಒಳಗಾಗುವಂತೆ ಆಗಿದೆ. ನಗರದ ರವಿ ವರ್ಮ ಬೀದಿಯಲ್ಲಿ ವ್ಯಕ್ತಿಯೊಬ್ಬರ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಬಂದಿದ್ದ ಸಂಬಂಧಿಗಳು ಈಗ ಕ್ವಾಂಟೈನ್ಗೆ ಒಳಗಾಗಿದ್ದಾರೆ.

ರವಿ ವರ್ಮ ಬೀದಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಕೆಲವರು ಬಂದಿರುವ ಬಗ್ಗೆ ಸ್ಥಳೀಯರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು ಕರೋನ ಪರೀಕ್ಷೆ ನಡೆಸಿ, ಕ್ವಾರಂಟೈನ್ಗೆ ಒಳಗಾಗುವಂತೆ ಸೂಚಿಸಿದರು. ಮಂಗಳೂರಿನಿಂದ ಬಂದಿದ್ದವರು ಹೋಂ ಕ್ವಾರಂಟೈನ್ ಆಗುತ್ತೇವೆ ಎಂದು ಮನವಿ ಮಾಡಿದರು. ಆದರೆ ಸ್ಥಳೀಯರು ಇವರನ್ನು ರವಿ ವರ್ಮ ಬೀದಿಯ ಮನೆಯಲ್ಲಿ ಕ್ವಾರಂಟೈನ್ ಮಾಡಲು ವಿರೋಧ ವ್ಯಕ್ತಪಡಿಸಿದರು. ಹಾಗಾಗಿ ಸರ್ಕಾರದ ವ್ಯವಸ್ಥೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















