ಕುವೆಂಪು ವಿವಿ ಘಟಿಕೋತ್ಸವಕ್ಕೆ ಡೇಟ್ ಫಿಕ್ಸ್, ಡಿಸಿ ಅನುಮತಿಯೊಂದೇ ಬಾಕಿ, ಹೇಗಿರುತ್ತೆ? ಯಾರೆಲ್ಲ ಭಾಗಿ ಆಗಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020

ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿ ನೀಡಿದಲ್ಲಿ ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.

106612285 1162975474063871 6666297831569268023 o.jpg? nc cat=109& nc sid=8024bb& nc ohc=Xy3dfLBG13EAX fnF0M& nc ht=scontent.fblr11 1

ಕುವೆಂಪು ವಿವಿಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ, ಈಗಾಗಲೇ ಕರೋನಾದ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜುಭಾಯಿ ವಾಲಾ, ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಿಂಗಳ ಅಂತ್ಯದ ವೇಳೆಗೆ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

107087191 1162975564063862 8319057471826162317 o.jpg? nc cat=108& nc sid=8024bb& nc ohc=oDE08u6BdXcAX8CwFoI& nc ht=scontent.fblr11 1

ಆಂತರಿಕ ಘಟಿಕೋತ್ಸವದ ಪ್ಲಾನ್

ದಿನೇ ದಿನೇ ಕರೋನ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನುಮತಿ ನೀಡಿದಲ್ಲಿ ಈ ಬಾರಿಯ ಘಟಿಕೋತ್ಸವವನ್ನು ಇನ್ ಹೌಸ್ ಮಾದರಿಯಲ್ಲಿ (ಆಂತರಿಕವಾಗಿ) ಆಯೋಜಿಸಲಾಗುವುದು. ಸುಮಾರು ಒಂದು ಸಾವಿರ ಜನರು ಭಾಗವಹಿಸಬಹುದಾದ ವಿಶ್ವವಿದ್ಯಾಲಯದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವವನ್ನು ನಡೆಸಲಾಗುವುದು.

ರಾಂಕ್ ವಿಜೇತರು, ಪಿಎಚ್‍ಡಿ ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಭಾಗವಹಿಸಬಹುದಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.

ಜೇಷ್ಠತಾ ಪಟ್ಟಿಗೆ ಅನುಮೋದನೆ

ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಜೇಷ್ಠತೆಗೆ ಸಂಬಂಧಿಸಿದಂತೆ, ಜನವರಿ 20ರಂದು ಅಂತರ್ಜಾಲದಲ್ಲಿ ಪ್ರಕಟಿಸಿದ ಜೇಷ್ಠತಾ ಪಟ್ಟಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜೊತೆಗೆ ಇದಕ್ಕೆ ಸಂಬಂಧಿಸಿದ ಬಡ್ತಿ ಮತ್ತ ವೇತನ ಸವಲತ್ತುಗಳನ್ನು ಸಹ ಅತಿ ಜರೂರೆಂದು ಪರಿಗಣಿಸಿ ಕೂಡಲೇ ಅರ್ಹ ಸಿಬ್ಬಂದಿಗೆ ಒದಗಿಸಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಕುಲಸಚಿವ ಪ್ರೊ. ಎಸ್.ಎಸ್.ಪಾಟೀಲ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ವೆಂಕಟೇಶ್ವರಲು, ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಎಚ್.ಬಿ.ರಮೇಶ್ ಬಾಬು, ರಾಮಲಿಂಗಪ್ಪ, ಎಸ್. ಆರ್. ನಾಗರಾಜ್, ಕಿರಣ್ ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment