ಶಿವಮೊಗ್ಗ ಲೈವ್.ಕಾಂ | AYANUR NEWS | 11 ಜುಲೈ 2020
ಬೆಂಗಳೂರಿನಿಂದ ಬಂದಿದ್ದ ಕಾರ್ಪೆಂಟರ್ ಒಬ್ಬರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಯನೂರಿನ ಕೋಟೆ ಪ್ರದೇಶಕ್ಕೆ ಬೆಂಗಳೂರಿನಿಂದ ಬಂದಿದ್ದ 48 ವರ್ಷದ ಕಾರ್ಪೆಂಟರ್ ಒಬ್ಬರಿಗೆ ಸೋಂಕು ತಗುಲಿದೆ. ಇವರು ಪತ್ನಿ, ಮೂವರು ಮಕ್ಕಳೊಂದಿಗೆ ಬಂದಿದ್ದರು. ಆಯನೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು.
ಸೋಂಕು ದೃಢವಾಗುತ್ತಿದ್ದಂತೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಮನೆಯಲಿದ್ದ ಆರು ಮಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]