ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಸೋಂಕು ಹರಡುವುದನ್ನು ತಡೆಯಲು ಗಾಂಧಿ ಬಜಾರ್ನ ವರ್ತಕರು ಇನ್ಮುಂದೆ ಮಧ್ಯಾಹ್ನ ಮೂರು ಗಂಟೆಗೆ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಅದೆ ರೀತಿ ಇತರೆಡೆಯು ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ ಮತ್ತು ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೋನ ನಿಯಂತ್ರಣಕ್ಕಾಗಿ ನಗರದ ವಿವಿಧೆಡೆಯ ವರ್ತಕರು ಮಧ್ಯಾಹ್ನ ಮೂರು ಗಂಟೆಗೆ ವ್ಯಾಪಾರ, ವಹಿವಾಟು ಬಂದ್ ಮಾಡಲು ನಿರ್ಧರಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡುವುದಾಗಿ ಹಲವು ಸಂಘ ಸಂಸ್ಥೆಗಳು ತಿಳಿಸಿವೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶವಿದೆ.
ಪಾಲಿಕೆ ಕಮಿಷನರ್ ಸ್ಪಷ್ಟನೆ
ಇನ್ನು, ಶಿವಮೊಗ್ಗ ಲೈವ್.ಕಾಂಗೆ ಸ್ಪಷ್ಟನೆ ನೀಡಿದ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ, ಲಾಕ್ ಡೌನ್ ಸಂಬಂಧ ಪಾಲಿಕೆಯಿಂದ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ. ಆದರೆ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವುದಾಗಿ ತಿಳಿಸಿದ್ದಾರೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






