
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಾಫ್ ಡೇ ಲಾಕ್ ಡೌನ್ ಜಾರಿಯಾದರೂ ರಸ್ತೆಗಿಳಿದಿದ್ದ ವಾಹನಗಳ ತಪಾಸಣೆಗೆ ಖಾಕಿ ಪಡೆ ಫೀಲ್ಡಿಗಿಳಿದಿದೆ. ಪ್ರಮುಖ ಸರ್ಕಲ್ ಮತ್ತು ರಸ್ತೆಗಳಲ್ಲಿ ವಾಹನಗಳನ್ನು ತಡೆದು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಗಾಂಧಿ ಬಜಾರ್ನಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅಂಗಡಿಗಳನ್ನು ಬಂದ್ ಮಾಡಿಸಿದರು. ವಾಹನಗಳನ್ನು ತಡೆದು ತಪಾಸಣೆ ನಡೆಸಿ, ಅವುಗಳನ್ನು ಸೀಜ್ ಮಾಡುವಂತೆ ಪೊಲೀಸರಿಗೆ ತಿಳಿಸಿದರು.

ಮತ್ತೊಂದೆಡೆ ಅಮೀರ್ ಅಹಮದ್ ಸರ್ಕಲ್ನಲ್ಲಿ ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ್ ಅವರು ವಾಹನಗಳ ತಪಾಸಣೆ ನಡೆಸಿದರು. ಇನ್ನು ಆಲ್ಕೊಳ ಸರ್ಕಲ್ನಲ್ಲಿ ಗ್ರಾಮಾಂತರ ಪೊಲೀಸ್ ಠಾನೆ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದಲ್ಲಿ ತಪಾಸಣೆ ನಡೆಸಿ, ಸರಿಯಾದ ಕಾರಣ ನೀಡದ ರಸ್ತೆಗಿಳಿದ ವಾಹನಗಳನ್ನು ವಶಕ್ಕೆ ಪಡೆಯಲಾಯಿತು.
ನಗರದ ಹಲವೆಡೆ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಹನ ತಡೆದು ಕಾರಣ ಕೇಳುತ್ತಿದ್ದಾರೆ. ಅಗತ್ಯ ಸೇವೆಗಳಿಗಾಗಿ ಓಡಾಡುವವರಿಗೆ ಮಾತ್ರ ಅವಕಾಶವಿದೆ.
ಜನ ಸಂಚಾರಕ್ಕೆ ಕಾರಣವೇನು?
ಬ್ಯಾಂಕು, ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರಿ ನೌಕರರು ಓಡಾಡುತ್ತಿದ್ದಾರೆ. ಆಸ್ಪತ್ರೆ ಸಿಬ್ಬಂದಿ, ರೈತರು ಓಡಾಡಲು ಅವಕಾಶವಿದೆ. ಇದರ ಹೊರತಾಗಿ ಬಹುತೇಕರು ಆಸ್ಪತ್ರೆಗೆ ಬಂದಿರುವ ನೆಪ ಹೇಳುತ್ತಿದ್ದಾರೆ. ಇನ್ನೂ ಕಲೆವರು ಮೆಡಿಕಲ್ ಶಾಪ್ಗೆ ತೆರಳುತ್ತಿರುವುದಾಗಿ ತಿಳಿಸುತ್ತಿದ್ದಾರೆ. ಕೆಲವರಂತೂ ಬೇರೆ ಊರಿನಿಂದ ಬಂದಿದ್ದು, ಊರಿಗೆ ಮರಳುತ್ತಿರುವ ಸಬೂಬು ಹೇಳುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






