
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ನಗರದಲ್ಲಿ ಹಾದು ಹೋಗಿರುವ ರಾಜಕಾಲುವೆಯು ಶಿಥಿಲಗೊಂಡಿದ್ದು, ಅದನ್ನೂ ಕೂಡಲೇ ರಿಪೇರಿ ಮಾಡಿಸಬೇಕು ಎಂದು ಒತ್ತಾಯಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ರಾಜಕಾಲುವೆಯು ಶರಾವತಿ ನಗರದಿಂದ ಸವಳಂಗ ರಸ್ತೆಯ ಮೂಲಕ ಬಸವನಗುಡಿ, ಜಯನಗರದಲ್ಲಿ ಹಾದು ಹೋಗಿದೆ. ಇದು ಸಂಪೂರ್ಣ ಶಿಥಿಲಗೊಂಡಿದೆ. ಮಳೆ ಬಂದರೆ ಸುತ್ತಮುತ್ತಲ ಮನೆಗಳಿಗೆ ನೀರು ನುಗ್ಗಲಿದೆ. ಇದರಿಂದ ಆತಂಕಕ್ಕೀಡಾದ ಜನರು ಮನೆ ಖಾಲಿ ಮಾಡುತ್ತಿದ್ದಾರೆ.
ಕರೋನ ಸೋಂಕು ಭೀತಿಯಲ್ಲಿರುವ ಜನರಿಗೆ ಈ ರಾಜ ಕಾಲುವೆಯಿಂದ ಮತ್ತಷ್ಟು ಕಾಯಿಲೆಗಳು ಹರಡಬಹುದು ಎಂಬ ಆತಂಕವಿದೆ. ಇದೇ ಕಾರಣಕ್ಕೆ ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿ ಸೇರಿ ಹಲವರಿಗೆ ಮನವಿ ಸಲ್ಲಿಸಲಗಿದೆ. ಆದರೂ ಯಾರೂ ಈ ಬಗ್ಗೆ ಗಮನ ವಹಿಸಿಲ್ಲ. ಕೂಡಲೇ ರಾಜಕಾಲುವೆ ಕುರಿತು ಗಮನ ವಹಿಸುವಂತೆ ಸಚಿವ ಈಶ್ವರಪ್ಪ ಅವರಿಗೆ ಮನವಿ ಮಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಶಿವಮೊಗ್ಗ ನಗರಾಧ್ಯಕ್ಷ ಎಚ್ ಪಿ ಗಿರೀಶ್, ರಾಜ್ಯ ಕಾರ್ಯದರ್ಶಿ ಆರ್.ಕಿರಣ್, ಗ್ರಾಮಾಂತರ ಅಧ್ಯಕ್ಷ ನಿತಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಲೋಕೇಶ್ ಇತರರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






