
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ನೀಡಿರುವ ಹೇಳಿಕೆಯನ್ನು ಕೂಡಲೆ ಹಿಂಪಡೆಯಬೇಕು ಎಂದು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಅವರು ನಿಷ್ಕ್ರಿಯ ಸಚಿವ ಎಂದು ಪ್ರಸನ್ನಕುಮಾರ್ ಹೇಳಿಕೆ ನೀಡಿರುವುದು ಹಸ್ಯಾಸ್ಪದ ಎಂದು ಟೀಕಿಸಿದರು.

ಈಶ್ವರಪ್ಪ ಅವರು ಐದು ಬಾರಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿದ್ದರು. ಇವರಿಂದ ಹಲವು ಅಭಿವೃದ್ಧಿ ಕಾರ್ಯಗಳಾಗಿವೆ. ಶಿವಮೊಗ್ಗ ಅಭಿವೃದ್ಧಿಯಲ್ಲಿ ಇವರದ್ದು ಪ್ರಮುಖ ಪಾತ್ರವಿದೆ. ಇವರನ್ನು ನಿಷ್ಕ್ರಿಯ ಅನ್ನುವುದು ನಿಜಕ್ಕೂ ಹಾಸ್ಯಾಸ್ಪದ. ಹಾಗಾಗಿ ಪ್ರಸನ್ನಕುಮಾರ್ ಅವರು ತಮ್ಮ ಹೇಳಿಕೆಯನ್ನು ಕೂಡಲೆ ಹಿಂಪಡೆಯಬೇಕು. ಅವರು ಶಾಸಕರಾದಾಗ ಒಂದೂ ಕೆಲಸ ಮಾಡಿಲ್ಲ. ಈಗ ಇರುವಿಕೆ ತೋರಿಸಲು ಇಂತಹ ಹೇಳಿಕೆ ನಿಡುತ್ತಿದ್ದಾರೆ ಎಂದು ದತ್ತಾತ್ರಿ ಟೀಕಿಸಿದರು.
ಬಳ್ಳೆಕೆರೆ ಸಂತೋಷ್, ಶಿವರಾಜ್, ನಾಗರಾಜ್, ಕೆ.ವಿ.ಅಣ್ಣಪ್ಪ, ಮೋಹನ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






