ಶಿವಮೊಗ್ಗ ವಿದ್ಯಾನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಇಬ್ಬರು ಬೈಕ್ ಸವಾರರು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020

ಲಾರಿ ಮತ್ತು ಬೈಕ್‍ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಬೈಕ್ ಸಾವರರು ಮೃತರಾಗಿದ್ದಾರೆ. ವಿದ್ಯಾನಗರದ ದುರ್ಗಮ್ಮ ಬೀದಿ ಬಳಿ ಬಿ.ಹೆಚ್‍.ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಹೇಗಾಯ್ತು ಅಪಘಾತ?

ತುಂಗಾ ನದಿ ಸೇತುವೆ ಕಡೆಯಿಂದ ತೆರಳುತ್ತಿದ್ದ ಬೈಕ್‍ ಮತ್ತು ಭದ್ರಾವತಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಬಲ್ ರೋಡ್ ಇದ್ದರೂ ಲಾರಿ ಮತ್ತು ಬೈಕ್ ಒಂದೇ ಬದಿಯಲ್ಲಿ ಬಂದಿದ್ದರಿಂದ ಮುಖಾಮುಖಿ ಡಿಕ್ಕಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಒಂದು ಬದಿಯ ರಸ್ತೆಯನ್ನು ಬಂದ್ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.  

109775156 1171076726587079 5012284077609106892 n.png? nc cat=101& nc sid=8024bb& nc ohc=gc8UGzgggzkAX Y1cqx& nc ht=scontent.fblr11 1

ಒಬ್ಬ ಸ್ಥಳದಲ್ಲೇ, ಮತ್ತೊಬ್ಬ ಆಸ್ಪತ್ರೆಯಲ್ಲಿ ಸಾವು

ಡಿಕ್ಕಿಯ ರಭಸಕ್ಕೆ ಪಲ್ಸರ್‍ ಬೈಕ್‍ನಲ್ಲಿದ್ದ ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಅತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ, ಕೊನೆ ಉಸಿರೆಳೆದಿದ್ದಾನೆ. ಮೃತರನ್ನು ಗೋಂದಿ ಚಟ್ನಹಳ್ಳಿಯ ನವೀನ್ (30) ಮತ್ತು ವಿಜಯ್ (33) ಎಂದು ಗುರುತಿಸಲಾಗಿದೆ.

ಉಂಬ್ಳೆಬೈಲಿಗೆ ಮೀನು ಹಿಡಿಯಲು ಹೊರಟಿದ್ದರು

ಬೈಕ್ ಸವಾರರು ಉಂಬ್ಳೆಬೈಲಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಉಂಬ್ಳೆಬೈಲಿನಲ್ಲಿ ಭದ್ರಾ ಜಲಾಶಯದ ಹಿನ್ನೀರು ಭಾಗದಲ್ಲಿ ಮೀನು ಹಿಡಿಯಲು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿದೆ. ಇನ್ನು, ಲಾರಿಯ ಒಂದು ಭಾಗ ಜಖಂ ಆಗಿದೆ. ಬೈಕ್‍ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಸಾಕ್ಷಿಯಾಗಿದೆ. ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 21, 2020

Leave a Comment