ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಶಿವಮೊಗ್ಗದಿಂದ ತುಂಗಾ, ಭದ್ರಾ ನದಿಯ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಗಸ್ಟ್ 5ರಂದು ಅಡಿಗಲ್ಲು ಇಡಲಾಗುತ್ತಿದೆ. ಭೂಮಿ ಪೂಜೆ ವೇಳೆ ತುಂಗಾ ಮತ್ತು ಭದ್ರಾ ನದಿಯ ನೀರು ಬಳಸಲಾಗುತ್ತದೆ. ಹಾಗಾಗಿ ಇವತ್ತು ಇವೆರಡು ನದಿಗಳ ನೀರನ್ನು ಅಯೋಧ್ಯೆಗೆ ಕಳುಹಿಸಲಾಯಿತು.

ಎರಡು ನದಿಯ ನೀರಿನ್ನು ಸಂಗ್ರಹಿಸಿ ತರಲಾಗಿದ್ದು, ವಿಶ್ವ ಹಿಂದೂ ಪರಿಷತ್ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಮುಖರ ಸಮ್ಮುಖದಲ್ಲಿ ನೀರನ್ನು ವಿಶೇಷವಾಗಿ ಪ್ಯಾಕ್ ಮಾಡಿ ಅಯೋಧ್ಯೆಗೆ ಕಳುಹಿಸಲಾಯಿತು.

https://www.facebook.com/liveshivamogga/videos/314310689747758/?t=0

ಭೂಮಿ ಪೂಜೆ ವೇಳೆ ದೇಶದ ಎಲ್ಲ ಪವಿತ್ರ ನದಿಗಳ ನೀರನ್ನು ಬಳಸಲು ಯೋಜಿಸಲಾಗಿದೆ. ಇದೇ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ನದಿಯ ನೀರನ್ನು ಕಳುಹಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 21, 2020

Leave a Comment