ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡಬೇಕು. ಕರೋನ ವಿರುದ್ಧ ಹೋರಾಟಕ್ಕೆ ಅಗತ್ಯ ಇರುವಷ್ಟು ರಕ್ಷಣಾ ಸಾಮಗ್ರಿ ಒದಗಿಸಬೇಕು ಎಂದು ಒತ್ತಾಯಿತಿ ಆಶಾ ಕಾರ್ಯಕರ್ತೆಯರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿದರು.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಮಾಸಿಕ 12 ಸಾವಿರ ಗೌರವ ಧನ ನೀಡುವಂತೆ ಒತ್ತಾಯಿಸಿ ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಈವರೆಗೂ ಸರ್ಕಾರ ನಮ್ಮತ್ತ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ಆರೋಗ್ಯ ತಪಾಸಣೆ, ಉಚಿತ ಚಿಕಿತ್ಸೆ
ಕರೋನ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರಿಗೆ ರಕ್ಷಣಾ ಸಾಮಾಗ್ರಿ ನೀಡಬೇಕು. ಆಗಾಗ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಒಂದು ವೇಳೆ ಪಾಸಿಟಿವ್ ಬಂದರೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ರಾಜೇಶ್ವರಿ, ಪ್ರೇಮಾ, ಶೀಲಾಬಾಯಿ, ಚಂದ್ರಕಲಾ, ಸತ್ಯವತಿ, ಸ್ವಾತಿ, ಆಶಾ, ವಸಂತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

- ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















