ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಚಿವ ಕೆ.ಎಸ್.ಈಶ್ವರಪ್ಪ ನಗರದ ಜನತೆಗೆ ಆಯುಷ್ ಶಕ್ತಿವರ್ಧಕ ಕಿಟ್ನ್ನು ವಿತರಿಸುತ್ತಿರುವುದು ಸ್ವಾಗತವೇ. ಇದಕ್ಕಾಗಿ ಆಧಾರ್ ಕಾರ್ಡ್ ಏಕೆ ಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಪ್ರಶ್ನೆ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಆಧಾರ್ ಕಾರ್ಡ್ ಎಂಬುದು ಒಂದು ಗೌಪ್ಯತೆಯ ಸಂಕೇತ. ಇದನ್ನು ಬಳಸಿಕೊಂಡು ಬಿಜೆಪಿಯವರು ಏನು ಮಾಡುತ್ತಾರೆ. ಹಾಗಾಗಿ ಕೂಡಲೇ ಆಧಾರ್ ಕಾರ್ಡ್ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ಕಿಟ್ ವಿತರಣೆ ವಿಚಾರದಲ್ಲಿ ನಮ್ಮ ವಿರೋಧ ಇಲ್ಲ ಎಂದರು.

ಕೆಲವು ಕಡೆ ಕಿಟ್ಗಾಗಿ ಹಣ ಕೂಡ ಪಡೆಯುತ್ತಿದ್ದಾರೆ ಎಂದ ಆರೋಪವಿದೆ. ಇದು ಈಶ್ವರಪ್ಪನವರಿಗೆ ಗೊತ್ತಿರಲಿಕ್ಕಿಲ್ಲ. ಇಂತವಕ್ಕೆಲ್ಲ ಅವರು ಆಸ್ಪದ ನೀಡಬಾರದು ಎಂದರು.
ಮಾಸ್ಕ್ ದಂಡದ ಕುರಿತು ಗಮನ ಕೊಡಿ
ಮಾಸ್ಕ್ ಧರಿಸದವರಿಗೆ ಇರುವವರಿಗೆ ದಂಡ ಹಾಕಲು ಪಾಲಿಕೆ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಇವರು ಕೆಲವರನ್ನು ಸೇರಿಸಿಕೊಂಡು ಗಲಾಟೆ ಕೂಡ ಮಾಡಿ ಹಣ ವಸೂಲಿ ಮಾಡುತ್ತಾರೆ. ಇದರಿಂದ ರಸ್ತೆಯಲ್ಲಿ ಜನ ಗುಂಪುಗೂಡುವಂತಾಗುತ್ತಿದೆ. ಹಾಗಾಗಿ ಅವರಿಂದ ವಸೂಲಿ ಮಾಡಿದ ದಂಡದ ಹಣದಲ್ಲೇ ಮಾಸ್ಕ್ ನೀಡಲಿ ಎಂದು ಪ್ರಸನ್ನಕುಮಾರ್ ಆಗ್ರಹಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





