ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂಗೆ ಲಿಫ್ಟ್, ಅರಸಾಳು ರೈಲ್ವೆ ನಿಲ್ದಾಣದ ‘ಮಾಲ್ಗುಡಿ ಮ್ಯೂಸಿಯಂ’ಗೆ ಚಾಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020

ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಯೋಜನೆ ಕಾಮಗಾರಿ ಅನುಷ್ಟಾನಗೊಳಿಸಲಾಗುವುದು ಎಂದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.

ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್ ಹಾಗೂ ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಕಾಮಗಾರಿಗಳನ್ನು ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು ಮಾತನಾಡಿದರು.

994 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ-ರಾಣೇಬೆನ್ನೂರ ಹೊಸ ರೈಲು ಯೋಜನೆ ಅನುಷ್ಟಾನಕ್ಕೆ ಮುಖ್ಯಮಂತ್ರಿಗಳು ಉಚಿತವಾಗಿ ಭೂಮಿ ಒದಗಿಸುವುದರ ಜತೆಗೆ ರಾಜ್ಯ ಸರ್ಕಾರದ ವತಿಯಿಂದ ಶೇ.50 ರಷ್ಟು ಯೋಜನಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ. ಅದೇ ರೀತಿ ದಾವಣಗೆರೆ-ಬೆಂಗಳೂರು ನಡುವೆ ಡಬಲ್ ಲೈನ್ ನಿರ್ಮಾಣಕ್ಕೂ ಜಮೀನು ಒದಗಿಸುವುದಾಗಿ ತಿಳಿಸಿದ್ದಾರೆ. ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದ ತಕ್ಷಣವೇ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮವನ್ನು ಇಲಾಖೆಯ ವತಿಯಿಂದ ಕೈಗೊಳ್ಳಲಾಗುವುದು ಎಂದು ಸಚಿವ ಅಂಗಡಿ ತಿಳಿಸಿದರು.

ಶಿವಮೊಗ್ಗ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಸಜ್ಜುಗೊಳಿಸಲಾಗಿದ್ದ ವರ್ಚುವಲ್ ವಿಡಿಯೋ ಮೂಲಕ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಎರಡು ಲಿಫ್ಟ್‍ಗಳನ್ನು ನಿರ್ಮಿಸಲಾಗಿದ್ದು ಹಿರಿಯ ನಾಗರಿಕರಿಗೆ ಹಾಗೂ ಅಶಕ್ತ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

https://www.facebook.com/liveshivamogga/videos/597251344308379/?t=0

ಇದೇ ರೀತಿ ಆರ್.ಕೆ.ನಾರಾಯಣ್ ಅವರ ಖ್ಯಾತ ಮಾಲ್ಗುಡಿ ಡೇಸ್’ ಕೃತಿಯನ್ನು ಟೆಲಿವಿಷನ್ ಸೀರಿಯಲ್ ಆಗಿ ನಿರ್ಮಿಸಿದ ಶಂಕರನಾಗ್ ಅವರು ಇದೇ ರೈಲ್ವೇ ನಿಲ್ದಾಣವನ್ನು ಪ್ರಮುಖವಾಗಿ ಬಳಸಿಕೊಂಡಿದ್ದಾರೆ. ಇದರ ನೆನಪಿಗಾಗಿ ಸುಮಾರು 25ಲಕ್ಷ ರೂ. ವೆಚ್ಚದಲ್ಲಿ ಹಳೆಯ ಸ್ಟೇಷನನ್ನು ಮಾಲ್ಗುಡಿ ಮ್ಯೂಸಿಯಂ ಆಗಿ ಪರಿವರ್ತಿಸಲಾಗಿದೆ. ಇಲ್ಲಿನ ಪ್ಲಾಟ್‍ಫಾರ್ಮ್ ವಿಸ್ತರಿಸಲಾಗಿದ್ದು, ಪ್ರಸ್ತುತ 12 ಕೋಚ್ ರೈಲುಗಳಿಗೆ ನಿಲುಗಡೆಗೆ ಅವಕಾಶವಿತ್ತು. ಇದೀಗ 28 ಕೋಚ್ ರೈಲುಗಳು ನಿಲ್ಲುವ ಸೌಲಭ್ಯ ಕಲ್ಪಿಸಲಾಗಿದೆ. ಇದೊಂದು ಪ್ರವಾಸಿ ತಾಣವಾಗಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ವರ್ಚುವಲ್ ವೇದಿಕೆಯ ಮೂಲಕ ಸಮಾರಂಭದಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment