ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ಜಿಂಕೆ ಮಾಂಸ ಮಾರಾಟಕ್ಕೆ ಆಟೋದಲ್ಲಿ ಸಾಗಿಸುತ್ತಿದ್ದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅರಣ್ಯ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಶ್ರೀರಾಮಪುರದ ಮಂಜುನಾಥ ಅಲಿಯಾಸ್ ಜಿಂಕೆ ಮಂಜ (30), ಮಲ್ಲಿಗೇನಹಳ್ಳಿಯ ಉಮೇಶ್ ನಾಯ್ಕ (32) ಬಂಧಿತರು. ಇವರಿಂದ 103 ಕೆ.ಜಿ. ಜಿಂಕೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ.
ಮಾರಾಟ ಮಾಡಲು ಆಟೋದಲ್ಲಿ ಜಿಂಕೆ ಮಾಂಸವನ್ನು ಸಾಗಣೆ ಮಾಡುತ್ತಿದ್ದರು. ಆಟೋ ಮತ್ತು 800 ರುಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ವಿವೇಕಾನಂದ ಬಡಾವಣೆಯಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ತುಂಗಾನಗರ ಪೊಲೀಸ್ ಠಾಣೆ ಪಿಎಸ್ಐ ತಿರುಮಲೇಶ್, ಶಂಕರ ವಲಯದ ಉಪ ವಲಯ ಅರಣ್ಯಾಧಿಕಾರಿ ಅಬ್ದುಲ್ ವಾಜೀದ್ ನೇತೃತ್ವದಲ್ಲಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200