
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ನಿಯಂತ್ರಣದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ ಶಿವಮೊಗ್ಗದ ಅಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಸಿಗದೆ ಮೃತಪಟ್ಟಿದ್ದಾರೆ. ಆದರೂ ಈ ವಿಚಾರವಾಗಿ ಜಿಲ್ಲಾಡಳಿತ ಗಂಭೀರವಾಗಿಲ್ಲ ಎಂದು ತೀರ್ಥಹಳ್ಳಿ ಕಾಂಗ್ರೆಸ್ ಆರೋಪಿಸಿದೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ತೀರ್ಥಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು, ಭದ್ರಾವತಿ ಆಸ್ಪತ್ರೆಗಳು, ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳು ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಮತ್ತು ವೆಂಟಿಲೇಟರ್ ವ್ಯವಸ್ಥೆಯಾಗುತ್ತಿಲ್ಲ. ಇವೆಲ್ಲ ಸಮಪರ್ಕವಾಗಿದ್ದರೆ ಮಾಜಿ ಶಾಸಕ ಅಪ್ಪಾಜಿಗೌಡ ಅವರು ಪ್ರಾಣಪಾಯದಿಂದ ಪಾರಾಗಬಹುದಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಅಭಿಪ್ರಾಯಪಟ್ಟರು.
ಮಾಜಿ ಶಾಸಕರಿಗೆ ಈ ಪರಿಸ್ಥಿತಿಯಾದರೆ ಸಾಮಾನ್ಯ ಜನರ ಕಥೆಯೇನು ಎಂದು ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕರೋನ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಕೂಡಲೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






