ಸ್ವಚ್ಛತೆ ವಿಚಾರವಾಗಿ ತೀರ್ಥಹಳ್ಳಿಯ ಹಣಗೆರೆಯಲ್ಲಿ ಗ್ರಾಮಸ್ಥರ ಗದ್ದಲ, ಲಘು ಲಾಠಿ ಪ್ರಹಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 9 ಸೆಪ್ಟಂಬರ್ 2020

ಗ್ರಾಮದ ಸ್ವಚ್ಛತೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೋಮು ಸೌಹಾರ್ದತೆಗೆ ಹೆಸರಾಗಿರುವ ಹಣಗೆರೆ ಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ.

ಗಲಾಟೆಗೆ ಕಾರಣವೇನು?

ಹಣಗೆರೆ ಕಟ್ಟೆಗೆ ವನ್ಯಜೀವಿ ವಿಭಾಗದ ಡಿಸಿಎಫ್‍ ಐ.ಎಂ.ನಾಗರಾಜ್ ಅವರು ಭೇಟಿ ನೀಡಿದ್ದರು. ಪರಿಸರ ಹಾನಿ ಮತ್ತು ಅತಿಕ್ರಮ ವಿಚಾರವಾಗಿ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ವಚ್ಛತೆ ವಿಚಾರವಾಗಿ ಈ ಗಲಾಟೆಯಾಗಿದೆ.

ಸ್ವಚ್ಛತೆ ವಿಚಾರವಾಗಿ ಗಲಾಟೆ ಏಕೆ?

ಹಣಗೆರೆ ಕಟ್ಟೆಯ ಧಾರ್ಮಿಕ ಕ್ಷೇತ್ರಕ್ಕೆ ಬರುವವರು ಪ್ರಾಣಿಬಲಿ ನೀಡಿ, ಅಲ್ಲಿಯೇ ಅಡುಗೆ ಮಾಡಿ, ಕಸ ಸುರಿಯುತ್ತಾರೆ. ಕೆಲವು ಪ್ರವಾಸಿಗರು ಮದ್ಯಪಾನ ಮಾಡಿ ಬಾಟಿಲಿಗಳನ್ನು ಎಸೆಯುತ್ತಿದ್ದಾರೆ. ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯದಿಂದಾಗಿ ದುರ್ವಾಸನೆ ಹೆಚ್ಚುತ್ತಿದೆ.

ಗ್ರಾಮಸ್ಥರು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಗ್ರಾಮಸ್ಥರ ಒಂದು ಗುಂಪು ಅರಣ್ಯ ವ್ಯಾಪ್ತಿಯಲ್ಲಿ ಅಡುಗೆ ಮಾಡಲು, ಪ್ರಾಣಿಬಲಿ ಸೇರಿದಂತೆ ಯಾವುದೇ ಚಟುವಟಿಕೆ ನಡೆಸದಂತೆ ಮನವಿ ಮಾಡಿತು. ಮತ್ತೊಂದು ಗುಂಪು ಧಾರ್ಮಿಕ ಕ್ಷೇತ್ರದಲ್ಲಿನ ಆಚರಣೆಗೆ ತಡೆ ನೀಡದಂತೆ ಒತ್ತಾಯಿಸಿತು. ಈ ವೇಳೆ ಗಲಾಟೆಯಾಗಿದೆ.

ಲಘು ಲಾಠಿ ಚಾರ್ಜ್, ಎಚ್ಚರಿಕೆ

ಗುಂಪು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು. ಬಳಿಕ ಕೆಲವರು ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಅರಣ್ಯ ವ್ಯಾಪ್ತಿಯಲ್ಲಿ ಅತಿಕ್ರಮ, ಅಕ್ರಮ ಚಟುವಟಿಕೆಗೆ ನಿರ್ಬಂಧವಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಎಫ್‍ಒ ಐ.ಎಂ.ನಾಗರಾಜ್ ಎಚ್ಚರಿಕೆ ನೀಡಿದರು.

ಸಿರಿಗೆರೆ ವನ್ಯಜೀವಿ ವಿಭಾಗದ ಆರ್‍ಎಫ್‍ಓ, ಮಾಳೂರು ಪಿಎಸ್‍ಐ ತಿಮ್ಮಪ್ಪ, ಹಣಗೆರೆ ಮತ್ತು ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರು ಇದ್ದರು.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 9, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment