ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020
ಪಿಎಂಎವೈ (ನಗರ) ಯೋಜನೆ ಅಡಿಯಲ್ಲಿ ಕೊಳಚೆ ಪ್ರದೇಶಗಳಲ್ಲಿನಿರ್ಮಾಣವಾಗುತ್ತಿರುವ ಮನೆಗಳು ಕಳಪೆಯಾಗಿವೆ. ಕೂಡಲೇ ಗುಣಮಟ್ಟದ ಕಾಮಗಾರಿಗೆ ನಡೆಸಬೇಕ ಎಂದು ಒತ್ತಾಯಿಸಿ ಶಾಂತಿನಗರ ನಾಗರಿಕ ಹಕ್ಕು ವೇದಿಕೆ ವತಿಯಿಂದ ವಿದ್ಯಾ ನಗರದಲ್ಲಿರುವ ಕೊಳಗೇರಿ ಅಭಿವೃದ್ಧಿ ಮಂಡಳಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರ ಯೋಜನೆ ಅಡಿಯಲ್ಲಿ ಫಲಾನುಭವಿಗಳ ಬಾಬ್ತಿನ ವಂತಿಕೆ ಯೊಂದಿಗೆ ಮನೆಗಳ ನಿರ್ಮಾಣವಾಗುತ್ತಿದೆ. ಈ ಕಾಮಗಾರಿಯು ಕಳಪೆಯಾಗಿದೆ. ನಿರ್ಮಾಣ ಹಂತದಲ್ಲಿಯೇ ಕಟ್ಟಡಗಳು ಕುಸಿಯುತ್ತಿವೆ. ಅಲ್ಲದೆ ಫಲಾನುಭವಿಗಳು ಪಕ್ಕಾ ಮನೆಗಳ ನಿರೀಕ್ಷೆಯಲ್ಲಿ ಮನೆಗಳನ್ನು ತೆರವು ಮಾಡಿಕೊಟ್ಟು ವರ್ಷಗಳೇ ಕಳೆದರೂ ಮನೆಗಳು ನಿರ್ಮಾಣ ಪೂರ್ಣಗೊಂಡಿಲ್ಲ ಎಂದು ದೂರಿದರು.
ಬಡ ಫಲಾನುಭವಿಗಳಿಂದ ಮರಳು, ಇಟ್ಟಿಗೆ, ಸಿಮೆಂಟ್, ಕಬ್ಬಿಣ ಸಾಮಗ್ರಿಗಾಗಿ ಸಾವಿರಾರು ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಸರ್ಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗೆ ಫಲಾನುಭವಿಗಳು ತಮ್ಮ ಪಾಲಿನ ವಂತಿಕೆಯನ್ನು ಕೆಎಸ್ಡಿಬಿಗೆ ಸಂದಾಯ ಮಾಡಿದ್ದರೂ ಸಂಬಂಧಪಟ್ಟ ಇಂಜಿನಿಯರ್ಗಳು ಅಕ್ರಮವಾಗಿ ಹಣ ವಸೂಲಿ ನಡೆಸುತ್ತಿದ್ದಾರ ಎಂದು ಆರೋಪಿಸಿದರು.
ಕೂಡಲೇ ಕೊಳಚೆ ಅಭಿವೃದ್ಧಿ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳದಿದ್ದರೆ ಫಲಾನುಭವಿಗಳೊಂದಿಗೆ ಕಚೇರಿಯ ಮುಂಭಾಗ ಟೆಂಟ್ ಹಾಕಿಕೊಂಡು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಧರಣಿಯಲ್ಲಿ ವೇದಿಕೆಯ ಮುಖಂಡರಾದ ರಾಮಣ್ಣ, ಸಾದಿಕ್, ಅಜರುದ್ದೀನ್, ಫೈರೋಜ್, ದಾದಾಪೀರ್, ಇಸ್ಮಾಯಿಲ್ ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






