ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಬಾಳೆಹೊನ್ನೂರು, ಕಳಸ, ಮೂಡಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ.
ಪ್ರಸ್ತುತ ಜಲಾಶಯದ ನೀರಿನ ಮಟ್ಟ 184.4 ಅಡಿಗೆ ಏರಿಕೆಯಾಗಿದೆ. ಒಳಹರಿವು 4,786 ಕ್ಯೂಸೆಕ್ ಇದೆ. 1,186 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಒಳಹರಿವು ಪ್ರಮಾಣ ಹೀಗೆ ಮುಂದುವರೆದರೆ ಇನ್ನೊಂದೆರಡು ದಿನದಲ್ಲಿ ಜಲಾಶಯದ ಗರಿಷ್ಠ ಮಟ್ಟ 186 ಅಡಿಗೆ ತಲುಪಲಿದೆ.
ಮಳೆ ಪ್ರಮಾಣ ಹೀಗೆ ಮುಂದುವರೆದರೆ ಜಲಾಶಯದಿಂದ ಹೊಳೆಗೆ ನೀರು ಬಿಡುವ ಸಾದ್ಯತೆ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

