ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ಅಮೃತ್ ಯೋಜನೆ ಅಡಿಯಲ್ಲಿ ನಗರದ ರಾಜಾಕಾಲುವೆಗಳ ದುರಸ್ತಿ ಕಾರ್ಯ ಇದುವರೆಗೂ ಪೂರ್ಣಗೊಂಡಿಲ್ಲ ಎಂದು ಮಹಾ ನಗರ ಪಾಲಿಕೆ ವಿಪಕ್ಷ ನಾಯಕ ಹೆಚ್.ಸಿ.ಯೋಗೀಶ್ ಆರೋಪಿಸಿದರು.
ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ರಾಜಾಕಾಲುವೆಗಳ ದುರಸ್ತಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ ಅವರು, ರಾಜಕಾಲು ವೆಗಳನ್ನು ರಿಪೇರಿಗೊಳಿಸುವ ಕಾರ್ಯ ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿವೆ ಎಂದು ದೂರಿದರು.
ಇತ್ತೀಚಿನ ದಿನಗಳಲ್ಲಿ ಅಲ್ಪ ಮಳೆಗೂ ಸಹ ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯದೆ ಮನೆಗಳಿಗೆ ನುಗ್ಗುತ್ತಿದ್ದು, ರಾಜಾ ಕಾಲುವೆಗಳ ದುರಸ್ತಿ ಕಾಮಗಾರಿ ಸರಿಯಾಗಿ ನಡೆಯದ ಕಾರಣ ಅವ್ಯವಸ್ಥೆಗೆ ಜನ ಒದ್ದಾಡುವ ಹಾಗೆ ಆಗಿದೆ ಎಂದರು.
ಯೋಗೀಶ್ ನೇತೃತ್ವದ ತಂಡದಲ್ಲಿ ಆರ್.ಸಿ ನಾಯ್ಕ್, ಯಮುನಾ ರಂಗೇಗೌಡ, ರೇಖಾರಂಗನಾಥ್ ಸೇರಿದ ಪಾಲಿಕೆ ಸದಸ್ಯರನ್ನೊಳಗೊಂಡ ನಿಯೋಗ ಹೊಸಮನೆ 6 ನೇ ಅಡ್ಡರಸ್ತೆ, 1 ನೇ ಮುಖ್ಯರಸ್ತೆಯ ರಾಜಕಾಲುವೆ, ಜೆಪಿಎನ್ ನಗರ, ಟಿಪ್ಪುನಗರ, ಶ್ರೀರಾಮ ನಗರ, ಶಾಂತಮ್ಮ ಲೇಔಟ್ ಹಾಗೂ ಮಹಾದೇವಿ ನಗರದ ರಾಜಕಾಲುವೆಗಳಿಗೆ ಭೇಟಿ ನಿಡಿ ಪರಿಶೀಲನೆ ನಡೆಸಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





