ಮೂವರು ಸಿಎಂಗಳು ಹಣ ಬಿಡುಗಡೆ ಮಾಡಿಲ್ಲ, ಚರಕ ಬಂದ್ ಆಗಲು ಸರ್ಕಾರದ ಇಚ್ಛಾಶಕ್ತಿ ಕೊರತೆಯೇ ಕಾರಣ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೆಗ್ಗೋಡಿನ ಚರಕ ಸಂಸ್ಥೆಯು ಕಳೆದ ಒಂದು ತಿಂಗಳಿಂದ ಮುಚ್ಚಿದ್ದು ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೆ ಇದಕ್ಕೆ ಕಾರಣ ಎಂದು ಚರಕ ಸಂಸ್ಥೆಯ ಸಂಸ್ಥಾಪಕ ಪ್ರಸನ್ನ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳಿಂದ ನೇಕಾರಿಕೆಗೆ ಸಹಾಯಧನ ಸೇರಿದಂತೆ ಒಟ್ಟು ೨.೫ ಕೋಟಿ ರೂ. ಸರ್ಕಾರದಿಂದ ಮಂಜೂರಾಗಬೇಕಿದೆ. ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಸಂಸ್ಥೆಗೆ ಹಣ ಬಿಡುಗಡೆ ಮಾಡಲು ನಿರ್ಲಕ್ಷ ವಹಿಸಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಆರೋಪಿಸಿದರು.

ನಮ್ಮ ಸಂಸ್ಥೆಯ ಹೆಣ್ಣು ಮಕ್ಕಳು ಧೈರ್ಯಗೆಡದೆ ಕೆರೆಹೊಳೆತ್ತುವ ಮತ್ತು ಸಂಸ್ಥೆಯ ಉತನ್ನಗಳನ್ನು ಹಲವು ಕಡೆಗಳಲ್ಲಿ ಹಂಚುವ ಮೂಲಕ ಸಂಸ್ಥೆ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಗ್ರಾಮೋದ್ಯೋಗ ಉಳಿಸಿ ಘೋಷಣೆಯೊಂದಿಗೆ ಉತ್ತರಕರ್ನಾಟಕ ಸೇರಿ ರಾಜ್ಯದ ವಿವಿಧೆಡೆ ಕಾರ್ಯಕ್ರಮ ಹಾಗೂ ಅಕ್ಟೋಬರ್ ೨ ರಂದು ಗಾಂಧಿ ಜಯಂತಿ ಸಂದರ್ಭದಲ್ಲಿ ಹೆಗ್ಗೋಡಿನಲ್ಲಿ ಉಪವಾಸ ಸತ್ಯಾಗ್ರಹ, ಗ್ರಾಮ ಸ್ವಚ್ಛತೆ ಹಾಗೂ ಸಂಜೆ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ನಮ್ಮ ಸಮಸ್ಯೆ ಬಗೆಹರಿಸಲು ನಾವು ಬೆಂಗಳೂರಿಗೆ ಮತ್ತು ದೆಹಲಿಗೆ ಹೋಗಿ ಜನಪ್ರತಿನಿಧಿಗಳನ್ನು ಕೇಳಿಕೊಳ್ಳುವುದಿಲ್ಲ. ಅವರೇ ನಮ್ಮ ಸಮಸ್ಯೆ ಬಗೆಹರಿಸಲು ಇಚ್ಛಾಶಕ್ತಿ ತೋರಬೇಕು ಎಂದು ಪ್ರಸನ್ನ ತಿಳಿಸಿದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment