ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟಂಬರ್ 2020
ಪೌರ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು, ಪೌರ ಕಾರ್ಮಿಕರ ಕಾಲಿಗೆ ಬಿದ್ದು ಗೌರವ ಸಲ್ಲಿಸಿದರು.
ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಇವತ್ತು ಶಿವಮೊಗ್ಗ ಪಾಲಿಕೆಯ ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ವಿತರಿಸಿ, ಸನ್ಮಾನಿಸಿದರು. ಇದೆ ವೇಳೆ ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಮಾಜಿ ಮೇಯರ್ ಲತಾ ಗಣೇಶ್ ಅವರು ಪೌರ ಕಾರ್ಮಿಕರ ಕಾಲಿಗೆ ಬಿದ್ದು ಗೌರವ ಸಮರ್ಪಿಸಿದರು.
https://www.facebook.com/liveshivamogga/videos/325935515299843/?t=0
ಪೌರ ಕಾರ್ಮಿಕರಿಗೆ ಪಾಲಿಕೆಯಿಂದ ಮನೆ
ಕಾರ್ಯಕ್ರಮದಲ್ಲಿ ಮಾತನಾಡಿದ ಮೇಯರ್ ಸುವರ್ಣಾ ಶಂಕರ್, ಪೌರ ಕಾರ್ಮಿಕರ ಹಲವು ವರ್ಷದ ಕನಸಾಗಿದ್ದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮನೆ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಸಲಾಗುತ್ತದೆ ಎಂದರು.
ಕರೋನದಿಂದ ಅಸುನೀಗಿದ ಇಬ್ಬರು ಪೌರ ಕಾರ್ಮಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಮೃತ ಚನ್ನಮ್ಮ ಮತ್ತು ಪಾಪಾನಾಯ್ಕ ಅವರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೆ ಮೃತರ ಕುಟುಂಬದ ಒಬ್ಬರಿಗೆ ಪಾಲಿಕೆಯಲ್ಲಿ ಉದ್ಯೋಗ ನೀಡಲಾಗುತ್ತದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಕಾರ್ಪೊರೇಟರ್ಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]