ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020
ಸೊರಬ ಮತ್ತು ಹೊಸನಗರ ತಾಲೂಕು ರಿಪ್ಪನ್ಪೇಟೆಯಲ್ಲಿ ಪೊಲೀಸರು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಸೊರಬ ರಿಪೋರ್ಟ್
ಹೆಚ್ಚೆ ಗ್ರಾಮದಲ್ಲಿ ಜಯಪ್ಪ ಎಂಬಾತ ಶುಂಠಿ ಬೆಳೆಯ ನಡುವೆ ಗಾಂಜಾ ಬೆಳೆದಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿ 20 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯಪ್ಪ ಪರಾರಿಯಾಗಿದ್ದು, ಈತನ ಪತ್ತೆ ಕಾರ್ಯ ನಡೆಯುತ್ತಿದೆ.

ಎಎಸ್ಪಿ ಶ್ರೀನಿವಾಸಲು, ಸಿಪಿಐ ಮರುಳಸಿದ್ದಪ್ಪ, ಪಿಎಸ್ಐ ಟಿ.ಬಿ.ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಎಎಸ್ಐ ಜಯಪ್ಪ, ಹೆಡ್ ಕಾನ್ಸ್ಟೇಬಲ್ ನೀಲೇಂದ್ರ ನಾಯ್ಕ್, ಸಿಬ್ಬಂದಿಗಳಾದ ದಿನೇಶ್, ಸಂದೀಪ್ ಕುಮಾರ್, ಸಲ್ಮಾನ್ ಖಾನ್ ಹಾಜಿ, ಸಿದ್ದನಗೌಡ ಬಣಕಾರ್, ಕೆ.ಎಸ್.ಶಶಿಧರ್, ಸುಧಾಕರ್ ದಾಳಿಯಲ್ಲಿ ಭಾಗವಹಿಸಿದ್ದರು.
ರಿಪ್ಪನ್ಪೇಟೆ ರಿಪೋರ್ಟ್
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಂಬರಹಳ್ಳ ಬೆಳ್ಳೂರು ಗ್ರಾಮದ ಲೋಕೇಶ್ ಎಂಬಾತ ತನ್ನ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 55 ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಲೋಕೇಶ್ (47) ಎಂಬಾತನನ್ನು ಬಂಧಿಸಲಾಗಿದೆ.

ತೀರ್ಥಹಳ್ಳಿ ಡಿವೈಎಸ್ಪಿ ಡಾ.ಸಂತೋಷ್, ಹೊಸನಗರ ಸಿಪಿಐ ಮಧುಸೂದನ್, ರಿಪ್ಪನ್ಪೇಟೆ ಪಿಎಸ್ಐ ಪಾರ್ವತಿ ಬಾಯಿ ನೇತೃತ್ವದಲ್ಲಿ ಪೊಲೀಸರು ಸಿಬ್ಬಂದಿಗಳು ದಾಳಿ ನಡೆಸಿದ್ದರು.
ಮಾಹಿತಿ ಗೌಪ್ಯವಾಗಿ ಇಡುತ್ತೇವೆ
ಜಿಲ್ಲೆಯ ಯಾವುದೇ ಭಾಗದಲ್ಲಿ ಗಾಂಜಾ ಬೆಳೆದಿರುವುದು, ಮಾರಾಟ ಮಾಡುವುದು ಕಂಡು ಬಂದಲ್ಲಿ ಮಾಹಿತಿ ನೀಡಬಹುದು ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇರಿಸಲಾಗುತ್ತದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ತಿಳಿಸಿದ್ದು, ತಮ್ಮ ಮೊಬೈಲ್ ನಂಬರ್ 9480803301ಗೆ ಗಾಂಜಾ ಕುರಿತು ಮಾಹಿತಿ ನೀಡಿಬಹುದು ಎಂದು ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















