
ಶಿವಮೊಗ್ಗ ಲೈವ್.ಕಾಂ | SAGARA NEWS | 1 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಳೆ ನಾಶ ಮಾಡುತ್ತಿದ್ದ 36 ಮಂಗಗಳಿಗೆ ವಿಷವುಣಿಸಿ ಹತ್ಯೆ ಮಾಡಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಪ್ಪಳಿ ಕಾಡಿನಲ್ಲಿ ಘಟನೆ ನಡೆದಿದೆ.

ಐವರು ಅರೆಸ್ಟ್ ಆಗಿದ್ದು ಹೇಗೆ?
ಮಂಗಗಳಿಗೆ ವಿಷವುಣಿಸಿ ಹತ್ಯೆ ಮಾಡಿ, ಅವುಗಳ ಮೃತದೇಹವನ್ನು ಎಸೆಯಲು ಆಗಮಿಸಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಂಧಿತರಿಂದ ಒಂದು ಕಾರು, ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಯಾರನ್ನೆಲ್ಲ ಬಂಧಿಸಲಾಗಿದೆ?
ತ್ಯಾಗರ್ತಿಯ ವಿಶ್ವನಾಥ್ (32), ದಸ್ತಗಿರ್ ಸಾಬ್ (40), ಲಾವಿಗೆರೆ ಲಂಬೋದರ (25), ಅಭಿಷೇಕ್ (24), ದಾವಣಗೆರೆಯ ಸಂಜೀವ್ ಶೇಟ್ ಎಂಬುವವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜಾಮೀನಿನ ಮೇಲೆ ಐವರನ್ನು ಬಿಡುಗಡೆ ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ, ಅಂತ್ಯಕ್ರಿಯೆ
ಮರಿಗಳು ಸೇರಿದಂತೆ ವಿವಿಧ ವಯೋಮಾನದ 36 ಮಂಗಗಳಿಗೆ ವಿಷವುಣಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಲ್ಲ ಮಂಗಗಳ ಮರೋಣತ್ತರ ಪರೀಕ್ಷೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 206ರ ಸ್ವಲ್ಪ ದೂರದಲ್ಲಿ ಅರಣ್ಯ ಇಲಾಖೆ ಸಮೂಹಿಕ ಅಂತ್ಯಕ್ರಿಯೆ ನೆರವೇರಿಸಿತು.
ಸಾಗರ ಎಸಿಎಫ್ ಶ್ರೀಧರ್, ರಾಜೇಶ್ ನಾಯ್ಕ, ಚೋರಡಿ ವಿಭಾಗದ ಆರ್ಎಫ್ಓ ಮೋಹನ್, ಅರಣ್ಯಾಧಿಕಾರಿಗಳಾದ ಇಸ್ಮಾಯಿಲ್, ರಾಘವೇಂದ್ರ ತಗ್ಗಿನ್, ಮಂಜುನಾಥ, ಚಂದ್ರಶೇಖರ್, ಎಂ.ಆರ್.ಅಶೋಕ್, ಭದ್ರೇಶ್, ಶಿವನಗೌಡ ಬಿರಾದಾರ್, ಸಂತೋಷ್ ನಾಯ್ಕ, ಪ್ರದೀಪ್ ಅವರು ಕಾರ್ಯಾಚರಣೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






