ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ಕೃಷಿ ಉತ್ಪನ್ನ ಮಾರುಕಟ್ಟೆ, ಭೂ ಸುಧಾರಣೆ, ಭೂಸ್ವಾಧೀನ ಕಾಯ್ದೆಗಳಿಎ ತಿದ್ದುಪಡಿ ತಂದಿರುವುದನ್ನು ಹೊರಟಿರುವುದನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೃಷಿ ಮಾರುಕಟ್ಟೆ, ಕೃಷಿ ಭೂಮಿ ಮತು ಭೂ ಸುಧಾರಣೆ, ಭೂ ಸ್ವಾಧೀನ ತಿದ್ದುಪಡಿ ಮಸೂದೆಗಳನ್ನು ಕಾನೂನು ಮಾಡಲು ಹೊರಟಿರುವ ತೀರ್ಮಾನದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಗಾಂಧಿ ಜಯಂತಿ ಅಂಗವಾಗಿ ಸತ್ಯಾಗ್ರಹ ನಡೆಸಿದ ಹೋರಾಟಗಾರರು, ಗ್ರಾಮೀಣ ಭಾರತದ ಗಾಂಧೀ ಕಂಡ ಗ್ರಾಮ ಭಾರತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಶಪಡಿಸಿ ಕಾರ್ಪೋರೇಟ್ ಕಂಪೆನಿ ಮತ್ತು ಬಹುರಾಷ್ಟ್ರೀಯ ಕಂಪೆನಿಗಳ ರಾಷ್ಟ್ರ ವಾಗಿ ಪರಿವರ್ತಿಸಲು ಕೈಗೊಂಡ ತೀರ್ಮಾನ ಕೃಷಿ ವಲಯಕ್ಕೆ ಅತ್ಯಂತ ಅಪಾಯಕಾರಿ ಯಾಗಿದೆ ಎಂದು ಹೇಳಿದರು.
ಸತ್ಯಾಗ್ರಹದಲ್ಲಿ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ, ಕೆ.ಎಲ್.ಅಶೋಕ್, ಕೆ.ಪಿ.ಶ್ರೀಪಾಲ್, ಹಿಟ್ಟೂರು ರಾಜು, ಡಿ.ಎಸ್.ಶಿವ ಕುಮಾರ್, ಇ.ಬಿ.ಜಗದೀಶ್, ಎಸ್.ಶಿವಮೂರ್ತಿ, ಪಿ.ಡಿ.ಮಂಜಪ್ಪ, ಡಿ.ಹೆಚ್.ರಾಮಚಂದ್ರಪ್ಪ, ಕೆ.ರಾಘವೇಂದ್ರ, ಸಿ.ಚಂದ್ರಪ್ಪ, ಜಿ.ವಿ.ರವೀಂದ್ರ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





