ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಅಕ್ಟೋಬರ್ 2020
ಭದ್ರಾ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ನೀರಿನಿಂದ ಮೇಲೆತ್ತಲಾಗಿದೆ.
ಮೃತರನ್ನು ಜನ್ನಾಪುರದ ರಾಜೇಶ್ (38) ಮತ್ತು ಮನೋಜ್ (17) ಎಂದು ಗುರುತಿಸಲಾಗಿದೆ. ಈ ಭಾಗದಲ್ಲಿ ಇರುವ ಸುಳಿಗೆ ಸಿಲುಕಿ ಇವರು ನೀರಿನಲ್ಲಿ ಮುಳುಗಿರುವ ಶಂಕೆ ಇದೆ.

ಹೇಗಾಯ್ತು ಘಟನೆ?
ಭದ್ರಾವತಿಯ ದೊಡ್ಡಗೋಪೇನಹಳ್ಳಿ ಬಳಿಯ ಗೋಂಧಿ ಚಾನೆಲ್ ಆಂಜನೇಯ್ ಬಂಡ ಬಳಿ ಘಟನೆ ಸಂಭವಿಸಿದೆ. ಈ ಭಾಗದ ಭದ್ರಾ ನದಿಯಲ್ಲಿ ಸುಳಿಗಳಿವೆ.
ಯುವಕರ ಗುಂಪೊಂದು ಇವತ್ತು ಭದ್ರಾ ನದಿಯಲ್ಲಿ ಈಜಲು ಬಂದಿತ್ತು. ಮನೋಜ್ ಸುಳಿಗೆ ಸಿಲುಕಿರುವ ಸಿಲುಕಿ ಮುಳುಗುತ್ತಿದ್ದರು. ರಕ್ಷಣೆಗಾಗಿ ಕೂಗಿದ್ದು, ರಾಜೇಶ್ ಧಾವಿಸಿದ್ದಾರೆ. ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ. ಮುಳುಗುತ್ತಿದ್ದ ಮತ್ತೊಬ್ಬ ಯುವಕನನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿಗಳು, ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಮೇಲೆತ್ತಲಾಗಿದೆ. ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





