ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಎರಡನೆ ಭಾಷೆ ಕನ್ನಡ, ಶಿವಮೊಗ್ಗ ಜಿಲ್ಲೆಯವರಿಗೆ ಅಧಿಕ ಪ್ರಶಸ್ತಿ, ಎಷ್ಟು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | NUMBERGALALLI NAMMURU | 6 ಅಕ್ಟೋಬರ್ 2020

ನಂಬರ್‍ಗಳ ಮೂಲಕ ನಮ್ಮೂರು ಶಿವಮೊಗ್ಗ ಜಿಲ್ಲೆಯ ಹಿರಿಮೆ, ಕುತೂಹಲಕಾರಿ ಸಂಗತಿ ತಿಳಿಸುವ ಪ್ರಯತ್ನವೇ ನಂಬರ್‍ಗಳಲ್ಲಿ ನಮ್ಮೂರು ಅಂಕಣ ಸರಣಿ.

ನಮ್ಮೂರಿಗೆ ಅತಿ ಹೆಚ್ಚು ಜ್ಞಾನಪೀಠ

ಸಿನಿಮಾ ಜಗತ್ತಿಗೆ ಆಸ್ಕರ್ ಪ್ರಶಸ್ತಿ ಹೇಗೋ ಭಾರತೀಯ ಸಾಹಿತ್ಯ ಪ್ರಪಂಚಕ್ಕೆ ಜ್ಞಾನಪೀಠ. ಸಾಹಿತ್ಯ ಲೋಕದ ಮೇರು ಪ್ರಶಸ್ತಿಗಳಲ್ಲಿ ಒಂದು ಜ್ಞಾನಪೀಠ. ಕನ್ನಡ ಸಾರಸ್ವತ ಲೋಕಕ್ಕೆ ಎಂಟು ಜ್ಞಾನಪೀಠ  ಪ್ರಶಸ್ತಿಗಳು ಬಂದಿವೆ. ಈ ಪೈಕಿ ಅತಿ ಹೆಚ್ಚು ಜ್ಞಾನಪೀಠ ಪಡೆದಿರುವ ಜಿಲ್ಲೆ ನಮ್ಮದು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗಕ್ಕೆ ಅತಿ ಹೆಚ್ಚು ಜ್ಞಾನಪೀಠ

ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಜಿಲ್ಲೆ ನಮ್ಮದು. ಶಿವಮೊಗ್ಗ ಜಿಲ್ಲೆಯ ಇಬ್ಬರು ಸಾಹಿತಿಗಳಿಗೆ ಈ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಕವಿ ಕುವೆಂಪು ಮತ್ತು ಡಾ.ಯು.ಆರ್.ಅನಂತಮೂರ್ತಿ ಅವರಿಗೆ ಜ್ಞಾನಪೀಠ ಲಭಿಸಿದೆ. ಇಬ್ಬರು ಸಾಹಿತಿಗಳು ತೀರ್ಥಹಳ್ಳಿ ತಾಲೂಕಿನವರು ಮತ್ತೊಂದು ವಿಶೇಷ.

21BGKUVMEPU2

ರಾಷ್ಟ್ರಕವಿ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಕೃತಿಗೆ 1967ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಿಭಿಸಿದೆ. ಕನ್ನಡ ಸಾಹಿತ್ಯ ಪ್ರಪಂಚದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲಿಗರು ಕುವೆಂಪು.

ಡಾ.ಯು.ಆರ್.ಅನಂತಮೂರ್ತಿ ಅವರ ಸಮಗ್ರ ಸಾಹಿತ್ಯಕ್ಕೆ 1994ರಲ್ಲಿ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡಕ್ಕೆ ಆರನೆ ಜ್ಞಾನಪೀಠ ತಂದುಕೊಟ್ಟ ಹೆಮ್ಮೆ ಇವರದ್ದು.

ananta2

ಮತ್ಯಾರಿಗೆಲ್ಲ ಜ್ಞಾನಪೀಠ ಲಭಿಸಿದೆ?

1973ರಲ್ಲಿ ದ.ರಾ.ಬೇಂದ್ರೆ (ಧಾರವಾಡ), 1977ರಲ್ಲಿ ಕೆ.ಶಿವರಾಮ ಕಾರಂತ (ಉಡುಪಿ), 1983ರಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ (ಕೋಲಾರ), 1990ರಲ್ಲಿ ವಿ.ಕೃ.ಗೋಕಾಕ (ಹಾವೇರಿ), 1998ರಲ್ಲಿ ಗಿರೀಶ್ ಕಾರ್ನಾಡ್ (ಬೆಂಗಳೂರು), 2010ರಲ್ಲಿ ಡಾ.ಚಂದ್ರಶೇಖರ ಕಂಬಾರ (ಬೆಳಗಾವಿ) ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಲಾಗಿದೆ.

ಏನಿದು ಜ್ಞಾನಪೀಠ?

ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಜ್ಞಾನಪೀಠ. 1961ರಿಂದ ಸಾಹು ಜೈನ್ ಕುಟುಂಬ ಈ ಪ್ರಶಸ್ತಿ ನೀಡುತ್ತಿದ್ದಾರೆ. ಪ್ರಶಸ್ತಿ ವಿಜೇತರಿಗೆ ಒಂದು ಫಲಕ, 11 ಲಕ್ಷ ರೂ. ನಗದು ಮತ್ತು ವಾಗ್ದೇವಿಯ ಕಂಚಿನ ವಿಗ್ರಹ ನೀಡಿ ಗೌರವಿಸಲಾಗುತ್ತದೆ. ಈವರೆಗೆ ಹಿಂದಿ ಭಾಷಗೆ 11 ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು, ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯಾಗಿದೆ. ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು, ಎರಡನೇ ಸ್ಥಾನದಲ್ಲಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment