ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020
ಶಿವಮೊಗ್ಗ ದಸರಾಗೆ ಸಿದ್ಧತೆಗಳು ಆರಂಭವಾಗಿದೆ. ಬನ್ನಿ ಮುಡಿಯುವ ಕಾರ್ಯಕ್ರಮದ ಸ್ಥಳ ಪರಿಶೀಲನೆಗಾಗಿ ಮೇಯರ್ ನೇತೃತ್ವದ ತಂಡ ಹಳೆ ಜೈಲು ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ವಿಜಯದಶಮಿಯಂದು ಹಳೆ ಜೈಲು ಆವರಣದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ವೇದಿಕೆ ನಿರ್ಮಾಣ, ಬನ್ನಿ ಮಂಟಪ ನಿರ್ಮಾಣ ಸಂಬಂಧ ಮೇಯರ್ ಸುವರ್ಣಾ ಶಂಕರ್ ನೇತೃತ್ವದಲ್ಲಿ ಕಾರ್ಪೊರೇಟರ್ಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ
ಉಪ ಮೇಯರ್ ಸುರೇಖಾ ಮುರಳೀಧರ್, ವಿಪಕ್ಷ ನಾಯಕ ಹೆಚ್.ಸಿ.ಯೋಗೇಶ್, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸದಸ್ಯರಾದ ಜ್ಞಾನೇಶ್ವರ್, ಶಂಕರ್ ಗನ್ನಿ, ನಾಗರಾಜ ಕಂಕಾರಿ, ವಿಶ್ವಾಸ್, ಯಮುನಾ ರಂಗೇಗೌಡ ಸೇರಿ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]