
ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಹಿನ್ನೆಲೆಯಲ್ಲಿ ಆನ್ಲೈನ್ ಶಿಕ್ಷಣ ನಡೆಯುತ್ತಿದ್ದು, ಶ್ರೀಮಂತ ಮಕ್ಕಳಿಗಷ್ಟೆ ಇದು ಅನುಕೂಲವಾಗುತ್ತಿದೆ. ಬಡ ಮಕ್ಕಳು ಇದರಿಂದ ವಂಚಿತವಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಹೊಸ ಟಿವಿ ಚಾನೆಲ್ ಆರಂಭಿಸಿ, ಎಲ್ಕೆಜಿಯಿಂದ ಪದವಿವರೆಗೆ ಬೋಧನೆ ಮಾಡಬೇಕು ಎಂದು ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ.
ಸಾಗರ ತಾಲೂಕು ಪಂಚಾಯಿತಿಯಲ್ಲಿ ಪ್ರೌಢಶಾಲೆ ಮುಖ್ಯಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿನಿಧಿಗಳ ಜೊತೆಗೆ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ, ಪ್ರತೇಕ ಟಿವಿ ಚಾನೆಲ್ ಮೂಲಕ ಬೋಧನೆ ಮಾಡಿದರೆ ವಿದ್ಯಾರ್ಥಿಗಳಿಗೆ ಅನುಕೂಲ ಎಂದು ತಿಳಿಸಿದರು.

ಶಾಲೆ ಬಿಡುವ ಮಕ್ಕಳ ಬಗ್ಗೆ ನಿಗಾ
ಸುದೀರ್ಘ ರಜೆ ಇದೆ. ಒಮ್ಮೆಲೆ ಶಾಲೆ ಆರಂಭವಾದರೆ ಮಕ್ಕಳ ಹಾಜರಾತಿ ಕುಸಿತ ಕಾಣಬಹುದು. ಹಾಗಾಗಿ ನೋಡಲ್ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಶಾಲೆ ಬಿಟ್ಟ ಮಕ್ಕಳು, ಬೇರೆಡೆ ಟಿ.ಸಿ.ತೆಗೆದುಕೊಂಡು ಹೋಗುವವರ ಕುರಿತು ಮಾಹಿತಿ ಪಡೆಯಬೇಕು. ಇನ್ನು, ಶಾಲೆಗಳು ಆರಂಭವಾದರೆ ಮಕ್ಕಳನ್ನು ಶಾಲೆಗಳತ್ತ ಸೆಳೆಯುವ ಕುರಿತು ಯೋಜಿಸಬೇಕು ಎಂದು ಮಲ್ಲಿಕಾರ್ಜುನ ಹಕ್ರೆ ತಿಳಿಸಿದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ಬಿಇಒ ಕೆ.ಆರ್.ಬಿಂಬಾ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಾಲಸುಬ್ರಹ್ಮಣ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೀಶ್, ಶೇಖರಪ್ಪ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ವರ ನಾಯ್ಕ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕೆ.ಬಿ.ಪ್ರಸನ್ನ ಸೇರಿದ ಹಲವರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






