ಶಿವಮೊಗ್ಗ ಗಾಂಧಿ ಬಜಾರ್ ಬಳಿ ದರೋಡೆಗೆ ಸಂಚು, ಪಿಸ್ತೂಲು ಸಹಿತ ಸಿಕ್ಕಿಬಿದ್ದ ಅಂತರ ಜಿಲ್ಲಾ ದರೋಡೆಕೋರರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 15 ಅಕ್ಟೋಬರ್ 2020

ಶಿವಮೊಗ್ಗದ ಗಾಂಧಿ ಬಜಾರ್ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರು ಅಂತರ ಜಿಲ್ಲಾ ದರೋಡೆಕೋರರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಒಂದು ಪಿಸ್ತೂಲು, ನಾಲ್ಕು ಗುಂಡು, ಒಂದು ಚಾಕು, ನಾಲ್ಕು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಮಧ್ಯಪ್ರದೇಶ ಮೂಲದ ಬಳ್ಳಾರಿಯ ಮೋತಿ ಸರ್ಕಲ್ ನಿವಾಸಿ ಸುರೇಶ್ ಸಿಂಗ್ (20), ಬಳ್ಳಾ ಪೋರ್ಟ್ ರಸ್ತೆ ನಿವಾಸಿ ರಣವೀರ್ ಸಿಂಗ್ (34), ರಾಯದುರ್ಗ ರಸ್ತೆಯ ರಾಮಲಾಲ್ (21) ಬಂಧಿತ ದರೋಡೆಕೋರರು.

121596815 3735046723186662 5447971735803034041 o.jpg? nc cat=109& nc sid=110474& nc ohc=Hok4gXgE5XMAX8JPzcv& nc ht=scontent.fixe1 1

ಆರೋಪಿಗಳು ದರೋಡೆಯ ಉದ್ದೇಶದಿಂದಲೇ ಬಳ್ಳಾರಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬಂದಿದ್ದರು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‍ಪಿ ಉಮೇಶ್ ನಾಯಕ್ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ದೊಡ್ಡಪೇಟೆ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ವಸಂತ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ಮಂಜಮ್ಮ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 15, 2020

Leave a Comment