ಅಡುಗೆ ಆದ ಮೇಲೆ ಬಡಿಸೋಕೆ ಕಾಂಗ್ರೆಸ್, ಜೆಡಿಎಸ್ ಪೈಪೋಟಿ, ಕುಮಾರಸ್ವಾಮಿ ಅವರಿಗೆ ಈ ಸರ್ಕಸ್ ಶೋಭೆಯಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅತಿಥಿ ಉಪನ್ಯಾಸಕರ ಬಾಕಿ ವೇತನದ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರ್ಕಸ್ ಮಾಡುತ್ತಿದ್ದಾರೆ. ಇದು ಅವರಿಗ ಶೋಭೆ ತರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ವಿಧಾನ ಪರಿಷತ್‌ನ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಇರುವ ಕಾರಣಕ್ಕೆ ಕುಮಾರಸ್ವಾಮಿ ಅವರು ಅತಿಥಿ ಉಪನ್ಯಾಸಕರ ಬಾಕಿ ವೇತನದ ಕುರಿತು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಆದರೆ ಸದನದಲ್ಲಿ ಈ ವಿಚಾರವನ್ನು ನಾನು ಪ್ರಸ್ತಾಪ ಮಾಡಿದಾಗ ಕುಮಾರಸ್ವಾಮಿ ಅವರು ಒಮ್ಮೆಯು ಧ್ವನಿ ಎತ್ತಲಿಲ್ಲ. ಅಡಿಗೆ ಆದ ಮೇಲೆ ಬಡಿಸೋಕೆ ಕಾಂಗ್ರೆಸ್, ಜೆಡಿಎಸ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

22 ಸಾವಿರ ಅತಿಥಿ ಶಿಕ್ಷಕರ ಬಗ್ಗೆ ಮಾತಿಲ್ಲ

ಅತಿಥಿ ಉಪನ್ಯಾಸಕರ ಬಾಕಿ ವೇತನ ಬಿಡುಗಡೆಗೆ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಇದನ್ನು ತಿಳಿದುಕೊಂಡು ಕುಮಾರಸ್ಚಾಮಿ ಅವರು ಈಗ ಆಗ್ರಹಪಡಿಸುತ್ತಿದ್ದಾರೆ. 22 ಸಾವಿರ ಅತಿಥಿ ಶಿಕ್ಷಕರು, ಐಟಿಐ ಶಿಕ್ಷಕರಿಗೆ ವೇತನ ಬಾಕಿ ಇದೆ. ಈ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ. ಕುಮಾರಸ್ವಾಮಿ ಅವರು ತಮ್ಮ ಅವಧಿಯಲ್ಲಿ ಐದು ಸಾವಿರ ವೇತನ ಹೆಚ್ಚಳ ಮಾಡುವುದಾಗಿ ಅತಿಥಿ ಉಪನ್ಯಾಸಕರ ಮೂಗಿಗೆ ತುಪ್ಪ ಸವರಿದ್ದರು ಎಂದು ಆಯನೂರು ಮಂಜುನಾಥ್ ಆರೋಪಿಸಿದರು.

87 ಕೋಟಿ ಬಾಕಿ ವೇತನಅತಿಥಿ ಉಪನ್ಯಾಸಕರಿಗೆ ಬಾಕಿ ವೇತನ ಕೊಡುವ ಕುರಿತು ಉನ್ನತ ಶಿಕ್ಷಣ ಇಲಾಖೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಉನ್ನತ ಶಿಕ್ಷಣ ಸಚಿವರಿಗೆ ಕರೋನ ಬಂದ ಹಿನ್ನೆಲೆ ಪ್ರಸ್ತಾವನೆ ಸಲ್ಲಿಕೆ ತಡವಾಗಿತ್ತು. 87 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸದ್ಯದಲ್ಲೇ ವೇತನ ಬಿಡುಗಡೆ ಆಗಲಿದೆ. ಸದನದಲ್ಲಿ ತಾವು ಧ್ವನಿ ಏರಿಸಿದ್ದರಿಂದಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆಯನೂರು ಮಂಜುನಾಥ್ ತಿಳಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment