ಕರೋನ ನಿರ್ವಹಣೆಯಲ್ಲಿ ಶಿವಮೊಗ್ಗ ತಾಲೂಕು ಆಡಳಿತ ವಿಫಲ, ತಾಲೂಕು ಪಂಚಾಯಿತಿಯಲ್ಲಿ ಸದಸ್ಯರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020

ಕರೊನಾ ನಿರ್ವಹಣೆಯ ಆರಂಭದಿಂದಲೂ ತಾಲೂಕು ಆಡಳಿತ ವಿಫಲವಾಗಿದೆ. ಕರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಚಾಲಕನಿಗೆ ಎರಡೂವರೆ ಸಾವಿರ ರೂ. ನೀಡಬೇಕೆಂಬ ವಿಷಯದ ತಾಲೂಕಿನಲ್ಲಿ ಹರಿದಾಡುತ್ತಿದೆ ಎಂದು ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಜಿ.ಶ್ರೀಧರ್ ದೂರಿದರು.

ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕರೋನ ನಿರ್ವಹಣೆಯಲ್ಲಿ ತಾಲೂಕು ಆಡಳಿತದ ವೈಫಲ್ಯದ ಕುರಿತು ಸದಸ್ಯರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

ಕರೋನ ನಿರ್ವಹಣೆ ವೈಫಲ್ಯದ ಕುರಿತು ಅನೇಕ ಸದಸ್ಯರು ದನಿಗೂಡಿಸಿದರು. ಆಯನೂರು ಕ್ಷೇತ್ರದ ಸದಸ್ಯೆ ಶಕುಂತಲಾ ಮಹೇಶ್ವರಪ್ಪ ಮಾತನಾಡಿ, ನನ್ನ ಪತಿ ಕರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ರಕ್ತದೊತ್ತಡ, ಮಧುಮೇಹ ಯಾವುದನ್ನೂ ಪರೀಕ್ಷಿಸುವುದಿಲ್ಲ. ಕೆಲ ದಿನ ಸಂಜೆ ಕಾಫಿ, ಟೀ ಕೂಡಾ ನೀಡಿಲ್ಲ ಎಂದು ನನ್ನ ಪತಿ ಹೇಳಿದ್ದರು ಎಂದು ಕರೊನಾ ಆಸ್ಪತ್ರೆಯ ಲೋಪಗಳನ್ನು ವಿವರಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿಪಡಿಸಿದಷ್ಟು ಹಾಸಿಗೆಗಳನ್ನು ಕರೊನಾ ಸೋಂಕಿತರಿಗೆ ಮೀಸಲಿಟ್ಟಿಲ್ಲ. ಸರಿಯಾದ ಚಿಕಿತ್ಸೆಯೂ ಸಿಗುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಾಪಂ ಇಒ ಡಾ.ಎಸ್.ಕಲ್ಲಪ್ಪ ಸೂಚಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಅವರು ಸಭೆಗೆ ಆಗಮಿಸಿದೇ ಇದ್ದ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಕರೊನಾ ಸಂದರ್ಭದಲ್ಲಿ ಅನೇಕ ವಿಚಾರಗಳ ಮಾಹಿತಿ ಪಡೆಯಬೇಕಿತ್ತು. ಆಸ್ಪತ್ರೆಗಳ ಬಗ್ಗೆ ಚರ್ಚಿಸುವ ಅವಶ್ಯಕತೆಯಿತ್ತು. ಇಂತಹ ಮಹತ್ವದ ಸಭೆಗೆ ಅವರು ಬಾರದೇ ಇರುವುದು ದುರದೃಷ್ಟಕರ. ಮಧ್ಯಾಹ್ನದ ಬಳಿಕವಾದರೂ ಅವರನ್ನು ಸಭೆಗೆ ಕರೆಸಲೇ ಬೇಕು ಎಂದು ಅಧ್ಯಕ್ಷರನ್ನು ಒತ್ತಾಯಿಸಿದರು.

ಅಧ್ಯಕ್ಷೆ ಗೀತಾ ಜಯಶೇಖರ್, ಉಪಾಧ್ಯಕ್ಷೆ ನಿರ್ಮಲಾ ಮೋಹನ್‌ಕುಮಾರ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಜಿ.ಶ್ರೀಧರ್, ತಾಪಂ ಇಒ ಡಾ.ಎಸ್.ಕಲ್ಲಪ್ಪ ಉಪಸ್ಥಿತರಿದ್ದರು.

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2020

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

Leave a Comment