ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020
ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
VIDEO REPORT
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ವೈಮಾನಿಕ ಸಮೀಕ್ಷೆಯ ಮೂಲಕ ನೆರೆ ಹಾನಿಯ ಪರಿಶೀಲನೆ ನಡೆಸುತ್ತೇನೆ. ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ಥರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಶಿಕಾರಿಪುರದಲ್ಲಿ ಇಂದು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇನೆ. ಇನ್ನು ಆರು ತಿಂಗಳಲ್ಲಿ ಕಾಮಗಾರಿಗಳು ಮುಕ್ತಾಯವಾಗಲಿದೆ ಎಂದರು.
ಇದೆ ವೇಳೆ ಜಾತಿ ಗಣತಿ ಜಾರಿಗೊಳಿಸುವ ಬಗ್ಗೆ ಮಾಜಿ ಸಿಎಂ ಸಿದ್ದಾರಮಯ್ಯ ಅವರು ಆಗ್ರಹದ ಕುರಿತು ಕೇಳಿದ ಪ್ರಶ್ನೆ ಉತ್ತರಿಸಲು ಸಿಎಂ ನಿರಾಕಸರಿಸಿದರು.