ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 ಅಕ್ಟೋಬರ್ 2020
ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ತೀರ್ಥಹಳ್ಳಿ ಮತ್ತು ಹೊಸನಗರ ವಲಯ ಅಧಿಕಾರಿಗಳು ದಾಳಿ ನಡೆಸಿ, ಶುಂಠಿ ಗಿಡಗಳ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಎರಡು ಕಡೆ ದಾಳಿ ನಡೆಸಿ, 67 ಹಸಿ ಗಾಂಜಾ ಗಿಡಗಳನ್ನು ಸೀಜ್ ಮಾಡಲಾಗಿದೆ.

ಹೊಸನಗರ ತಾಲೂಕು ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿಯ ನಾಗರಾಜ್ ಎಂಬುವವರ ಶುಂಠಿ ಹೊಲದಲ್ಲಿ 31 ಗಾಂಜಾ ಗಿಡ ಪತ್ತೆಯಾಗಿದೆ. ಶೇಖರಪ್ಪ ಎಂಬುವವರ ಹೊಲದಲ್ಲಿ 36 ಗಾಂಜಾ ಗಿಡಗಳು ಪತ್ತೆಯಾಗಿವೆ.
ಗಾಂಜಾ ಗಿಡಗಳನ್ನು ಸೀಜ್ ಮಾಡಿ, ಇಬ್ಬರ ವಿರುದ್ಧ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಉಪ ಅಧೀಕ್ಷಕ ಸಂತೋಷ್ ಕುಮಾರ, ಉಪ ನಿರೀಕ್ಷಕ ರಂಗನಾಥ ಅಮಿತ್ ಕುಮಾರ್, ಅಬಕಾರಿ ರಕ್ಷಕರಾದ ಮಲ್ಲಿಕಾ, ರಾಕೇಶ್, ನಾಗರಾಜ, ಪಾಂಡು, ಅಂಬವ್ವ ಗೋಳ, ಪ್ರಭಾಕರ, ಉಮೇಶ ಹಾಗೂ ಪ್ರಸನ್ನ ದಾಳಿಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?