ಸಂಸದರು, ಶಾಸಕರೆಲ್ಲ ಬಂದರೂ ಜಿಲ್ಲಾ ಪಂಚಾಯಿತಿ ಸದಸ್ಯರೇ ಗೈರು, ಸಾಮಾನ್ಯ ಸಭೆಗೆ ಮತ್ತೆ ಕೋರಂ ಕೊರತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2020

ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಮೈತ್ರಿಕೂಟ ಸದಸ್ಯರ ಮುನಿಸು ಇನ್ನೂ ತಣ್ಣಗಾಗಲಿಲ್ಲ. ಹಾಗಾಗಿ ಇವತ್ತು ಕೂಡ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಗೆ ಕೋರಂ ಕೊರತೆ ಉಂಟಾಗಿದೆ. ಹಾಗಾಗಿ ಸಭೆಯನ್ನು ಮತ್ತೊಮ್ಮೆ ಮುಂದೂಡಲಾಗಿದೆ.

ಸಂಸದ, ಶಾಸಕರೆಲ್ಲ ಬಂದಿದ್ದರು

ಇವತ್ತಿನ ಜಿಲ್ಲಾ ಪಂಚಾಯಿತಿ ಸಭೆ ಬಿಜೆಪಿ ಪಾಲಿಗೆ ಅತ್ಯಂತ ನಿರ್ಣಾಯಕವಾಗಿತ್ತು. ಹಾಗಾಗಿ ಸಂಸದ ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸಭೆಗೆ ಆಗಮಿಸಿದ್ದರು. ಕೋರಂ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು ಬಿಜೆಪಿ ಉದ್ದೇಶವಾಗಿತ್ತು. ಹಾಗಿದ್ದೂ ಕೋರಂ ಇರದೆ ಸಭೆಯನ್ನು ಮುಂದೂಡುವ ಅನಿವಾರ್ಯತೆ ಸೃಷ್ಟಿಯಾಯಿತು.

122186456 1245863829108368 6314197787686372996 n.jpg? nc cat=110& nc sid=110474& nc ohc=FmFMcJ6sDLgAX sODz & nc ht=scontent.fblr11 1

ಒಂದೇ ಒಂದು ಸ್ಥಾನದಿಂದ ಕೋರಂ ಕೊರತೆ

ಸಂಸದ, ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲೂಕು ಪಂಚಾಯಿತಿ ಅಧ್ಯಕ್ಷರು ಸೇರಿ ಒಟ್ಟು ಸದಸ್ಯರ ಸಂಖ್ಯೆ 51 ಇದು. ಸಭೆ ನಡೆಸಲು 26 ಸದಸ್ಯರ ಅಗತ್ಯವಿದೆ. ಆದರೆ ಇವತ್ತು 25 ಸದಸ್ಯರಷ್ಟೇ ಇದ್ದರು. ಒಬ್ಬ ಸದಸ್ಯರಿಂದಾಗಿ ಕೋರಂ ಕೊರತೆ ಉಂಟಾಯಿತು.

ಇವತ್ತಿನದ್ದು ಮಹತ್ವದ ಸಭೆ

ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಮತ್ತು ಬಿಜೆಪಿ ಪಾಲಿಗೆ ಇವತ್ತಿನದ್ದು ಅತ್ಯಂತ ಮಹತ್ವದ ಸಭೆಯಾಗಿತ್ತು. ಕಾಂಗ್ರೆಸ್, ಜೆಡಿಎಸ್ ಪಕ್ಷದ ಮೈತ್ರಿಕೂಟದಿಂದ ಅಧ್ಯಕ್ಷರಾದರೂ ಈ ಬಾರಿ ಮೂರು ಸ್ಥಾಯಿ ಸಮಿತಿಗೆ ಬಿಜೆಪಿಯವರನ್ನೇ ಅಧ್ಯಕ್ಷರಾನ್ನಾಗಿ ನೇಮಿಸಿದ್ದರು. ಇದೆ ಕಾರಣಕ್ಕೆ ಅಧ್ಯಕ್ಷರ ವಿರುದ್ಧ ಮೈತ್ರಿ ಪಕ್ಷದ ಸದಸ್ಯರು ಮುನಿಸಿಕೊಂಡಿದ್ದಾರೆ. ಆದರೆ ಬಿಜೆಪಿ ಪಕ್ಷ ಅಧ್ಯಕ್ಷರಿಗೆ ಬೆಂಬಲವಾಗಿ ನಿಂತಿದೆ. ಹಾಗಾಗಿ ಒಂದು ವೇಳೆ ಅವಿಶ್ವಾಸ ಮಂಡಿಸಿದರೆ, ಸಂಖ್ಯಾಬಲ ತೋರಿಸಲು ಇವತ್ತು ಸಂಸದರು, ಶಾಸಕರು ಸಭೆಗೆ ಬಂದಿದ್ದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಸಭೆಯಿಂದ ದೂರವೆ ಉಳಿದ ಮೈತ್ರಿ ಪಕ್ಷ

ಕಾಂಗ್ರೆಸ್, ಜೆಡಿಎಸ್‍ ಮೈತ್ರಿ ಪಕ್ಷಗಳು ಸಾಮಾನ್ಯ ಸಭೆಯಿಂದ ದೂರ ಉಳಿಯುತ್ತಿರುವುದು ಇದೆ ಮೊದಲಲ್ಲ. ಅಕ್ಟೋಬರ್ 13ರಂದು ನಡೆದ ಸಭೆಗೂ ಮೈತ್ರಿ ಸದಸ್ಯರು ಗೈರಾಗಿದ್ದರು. ಹಾಗಾಗಿ ಅ.21ಕ್ಕೆ ಸಭೆ ಮುಂದೂಡಲಾಗಿತ್ತು. ಈಗ ಸಭೆಯನ್ನು 27ಕ್ಕೆ ಮುಂದೂಡಲಾಗಿದೆ.

ಬಿಜೆಪಿ ಮುಖಂಡರ ಜೊತೆಗೆ ಕುಮಾರ್

ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರಿಗೆ ಬಿಜೆಪಿ ಬೆಂಬಲವಾಗಿ ನಿಂತಿದೆ. ಹಾಗಾಗಿ ಅಧ್ಯಕ್ಷೆ ಜ್ಯೋತಿ ಅವರ ಪತಿ ಕುಮಾರ್ ಅವರು ಬಿಜೆಪಿ ಮುಖಂಡರ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡರು. ಸಭೆಗೆ ಬಂದಿದ್ದ ಸಂಸದರು, ಶಾಸಕರನ್ನು ಮಾತನಾಡಿಸಿ, ಸಭೆಯ ಕುರಿತು ಬಿಜೆಪಿ ಶಾಸಕರ ಜೊತೆಗೆ ಚರ್ಚಿಸುತ್ತಿದ್ದದ್ದು ಗಮನಾರ್ಹವಾಗಿತ್ತು.

Zilla Panchayath Shivamogga 1 1

ಶಾಸಕ ಸಂಗಮೇಶ್ ಸಭೆಗೆ ಹಾಜರ್

ಸಾಮಾನ್ಯವಾಗಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಗೆ ಭದ್ರಾವತಿ ಶಾಸಕ ಸಂಗಮೇಶ್ವರ್ ಹಾಜರಾತಿ ಇರುತ್ತಿರಲಿಲ್ಲ. ಇವತ್ತಿನ ಸಭೆ ಮಹತ್ವದಾಗಿದ್ದ ಹಿನ್ನೆಲೆ, ಸಂಗಮೇಶ್ವರ್ ಅವರು ಸಭೆಗೆ ಹಾಜರಾದರು. ಆದರೆ ಸಭೆ ನಡೆಯುದ ಹಿನ್ನೆಲೆ, ಅವರು ಹಿಂತಿರುಗಿದರು. ಈ ವೇಳೆ ಅವರು ಸಂಸದ ರಾಘವೇಂದ್ರ ಅವರನ್ನು ಭೇಟಿಯಾಗಿ ಚರ್ಚಿಸಿದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2020

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment