ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018
ಶಾಸಕ ಆರಗ ಜ್ಞಾನೇಂದ್ರ ಅವರ ಹಗರಣಗ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಇದಕ್ಕೂ ಮೊದಲು ತೀರ್ಥಹಳ್ಳಿಯಲ್ಲಿ ಎರಡು ಪಾದಯಾತ್ರೆಗಳನ್ನು ನಡೆಸುವುದಾಗಿಯೂ ಅವರು ಸ್ಪಷ್ಟಪಡಿಸಿದ್ದಾರೆ.
ಏನೆಲ್ಲ ಹಗರಣಗಳಾಗಿವೆ? ಪಟ್ಟಿ ಬಿಡುಗಡೆ ಯಾವಾಗ?
ಆರಗ ಜ್ಞಾನೇಂದ್ರ ಕ್ಷೇತ್ರದ ಶಾಸಕರಾಗುವ ಬದಲು ಬಿಜೆಪಿ ಶಾಸಕರಾಗಿದ್ದಾರೆ. ಅವರು ಶಾಸಕರಾದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶಾಸಕರ ಬೆಂಬಲಿಗರೇ ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ. ಬಿಜೆಪಿ ತಾ.ಪಂ ಸದಸ್ಯರೊಬ್ಬರು ಪ್ರತೀ ದಿನ 500 ರೂ. ನೀಡುವಂತೆ ಪಿಡಿಓಗಳಿಗೆ ಒತ್ತಾಯಿಸುತ್ತಿದ್ದಾರೆ ಹೀಗೆ ಅನೇಕ ಹಗರಣಗಳಿದ್ದು ಇವುಗಳ ಪಟ್ಟಿಯನ್ನು ಜನವರಿ 3ರಂದು ಬಿಡುಗಡೆ ಮಾಡುವುದಾಗಿ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಪಾದಯಾತ್ರೆ ಯಾವಾಗ? ಎಲ್ಲೆಲ್ಲಿಂದ ನಡೆಯುತ್ತೆ?
ಶಾಸಕ ಆರಗ ಜ್ಞಾನೇಂದ್ರ ಅವರ ಹಗರಣಗಳ ಪಟ್ಟಿ ಬಿಡುಗಡೆ ಮುನ್ನ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎರಡು ಪಾದಯಾತ್ರೆ ನಡೆಸಲಿದ್ದಾರೆ. ಡಿ.17ರಂದು ಮೇಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಮಾಡಲಿದ್ದಾರೆ. ಇನ್ನು, ಜನವರಿ 3ರಂದು ಗುಡ್ಡೇಕೊಪ್ಪದಿಂದ ತೀರ್ಥಹಳ್ಳಿವರೆಗೂ ಪಾದಯಾತ್ರೆ ನಡೆಸಲಿದ್ದಾರೆ.
ಆಗುಂಬೆಯಿಂದ ಶಿವಮೊಗ್ಗಕ್ಕೆ ಪಾದಯಾತ್ರೆ
ಇನ್ನು, ಕೇಂದ್ರ ಸರ್ಕಾರದ ವಿರುದ್ಧ ಕಿಮ್ಮನೆ ರತ್ನಾಕರ್ ಅವರು ಮತ್ತೊಂದು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಈ ಪಾದಯಾತ್ರೆ ನಡೆಯಲಿದೆ. ಆಗುಂಬೆಯಿಂದ ಶಿವಮೊಗ್ಗದವರೆಗೆ ಈ ಪಾದಯಾತ್ರೆ ಸಾಗಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















