
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾಜ್ಯದಲ್ಲಿ ಕರೋನಾ ಸೋಂಕು ಹರಡುತ್ತಿರುವುದರಿಂದ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿದರೆ ಒಳ್ಳೆಯದು. ಆದರೆ ಹೈಕೋರ್ಟ್ ಮತ್ತು ಚುನಾವಣಾ ಆಯೋಗದ ಸೂಚನೆ ಪಾಲಿಸಲು ಬದ್ಧ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಒಂದೆಡೆ ಕರೋನಾ ಸೋಂಕು ಇರುವುದರಿಂದ ಶಾಲೆಗಳನ್ನು ಆರಂಭಿಸುವುದು ಬೇಡ ಎಂಬ ಅಭಿಪ್ರಾಯ ಇದೆ. ಅದೇ ರೀತಿ ಗ್ರಾಪಂ ಚುನಾವಣೆ ನಡೆಸಿದರೂ ಸೋಂಕು ಹೆಚ್ಚಳದ ಆತಂಕ ಇದೆ. ಹಾಗಾಗಿ ಸ್ವಲ್ಪ ಕಾಲ ಮುಂದೂಡಿದರೆ ಒಳ್ಳೆಯದು ಎಂಬ ಅಭಿಪ್ರಾಯ ಎಲ್ಲರದ್ದು ಆಗಿದೆ ಎಂದರು.
ರಾಜ್ಯದ 6021 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಿದರೆ ಕರೋನಾ ಸೋಂಕು ಹೆಚ್ಚಳ ಆಗಬಹುದು ಎಂಬ ಆತಂಕ ಗ್ರಾಮೀಣ ಪ್ರದೇಶಗಳಲ್ಲಿ ಇದೆ. ಬಿಜೆಪಿ ಮಾತ್ರವಲ್ಲದೆ, ಜೆಡಿಎಸ್ ಮತ್ತು ಕಾಂಗ್ರೆಸ್ ಕೂಡ ಇದನ್ನೇ ಹೇಳಿವೆ. ಇದನ್ನು ಹೊರತುಪಡಿಸಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ಚುನಾವಣಾ ಆಯೋಗ ಮತ್ತು ಹೈಕೋರ್ಟ್ ನೀಡುವ ಸೂಚನೆ ಪಾಲಿಸಲಾಗುವುದು ಎಂದರು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

About The Editor
ನಿತಿನ್ ಆರ್.ಕೈದೊಟ್ಲು






