ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 9 ನವೆಂಬರ್ 2020
ಶಿವಮೊಗ್ಗದ ಬಸವನಗಡಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯಿಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವಕರ ಗುಂಪೊಂದು ಹತ್ಯೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ.
ಮೃತನನ್ನು ಮಂಜುನಾಥ ಭಂಡಾರಿ (30) ಎಂದು ಗುರುತಿಸಲಾಗಿದೆ. ಬಸವನಗುಡಿ 5ನೇ ಕ್ರಾಸ್ನಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಹಳೆ ದ್ವೇಷವೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್ಪಿ ಉಮೇಶ್ ಈಶ್ವರ ನಾಯ್ಕ್, ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.