ಶಿವಮೊಗ್ಗ ಲೈವ್.ಕಾಂ |SAGARA NEWS | 23 NOVEMBER 2020
ಸಾಗರದ ಜೋಗ ರಸ್ತೆಯಲ್ಲಿ ಕಾರು ಮತ್ತು ಮೊಪೆಡ್ ಬೈಕ್ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರನ ತಲೆಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿವೃತ್ತ ಪ್ರಾಂಶುಪಾಲ ನೀರ್ ಕೊಡು ಬಡಾವಣೆಯ ಹನುಮಂತಪ್ಪ ಅವರ ತಲೆಗೆ ಗಂಭೀರ ಹೊಡೆತ ಬಿದ್ದಿದೆ. ತೀವ್ರ ರಕ್ತಸ್ರಾವವಾಗುತ್ತಿತ್ತು. ಕೂಡಲೆ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹನುಮಂತಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ
ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಬೈಕ್ ಕೂಡ ಹಾನಿಯಾಗಿದೆ. ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸಿದರು.
ದಿನಕ್ಕೊಂದು ಸಾಮಾನ್ಯ ಜ್ಞಾನದ ವಿಡಿಯೋ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]