ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020
ಪರಿಶಿಷ್ಟ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೇರಿದ ಜಾಗದಲ್ಲಿ ಗೋಶಾಲೆಗೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಎಸ್ಸಿ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್. ಸಿದ್ದಪ್ಪ ಅವರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಆಯನೂರು ಹೋಬಳಿ ವೀರಣ್ಣನಬೆನವಳ್ಳಿ ಗ್ರಾಮದ ಸ.ನಂ.78 ರಲ್ಲಿ ಸುಮಾರು 43 ಎಕರೆ ಜಾಗವಿದೆ. ಈ ಜಾಗದಲ್ಲಿ ಹಲವು ವರ್ಷಗಳಿಂದ ಪರಿಶಿಷ್ಟರು, ಹಿಂದುಳಿದ ವರ್ಗದವರು ಸುಮಾರು 300ಕ್ಕೂ ಹೆಚ್ಚು ಜೋಪಡಿಗಳನ್ನು ಹಾಕಿಕೊಂಡು ಹಲವು ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ ಈಗ ಕೆಲವರು ಇದಕ್ಕೆ ಹೈಕೋರ್ಟ್ನಿಂದ ಮಂಜಪ್ಪ ಮತ್ತು ಇತರರು ತಡೆಯಾಜ್ಞೆ ತಂದಿದ್ದಾರೆ. ಹಾಗಾಗಿ ಇದಿನ್ನು ನ್ಯಾಯಾಲಯದಲ್ಲಿದೆ.
ಇದರ ಮಧ್ಯೆ ಈ ಜಾಗದಲ್ಲಿ ಗೋ ಶಾಲೆ ತೆರೆಯಲು ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಇದಕ್ಕಾಗಿ 10 ಎಕರೆ ಜಮೀನು ಮಂಜೂರು ಮಾಡುತ್ತಿರುವುದಾಗಿ ತಿಳಿದುಬಂದಿದೆ. ಗೋ ಶಾಲೆಗೆ ಜಾಗ ಮಂಜೂರು ಮಾಡಲು ನಮ್ಮ ಅಭ್ಯಂತರವೇನೂ ಇಲ್ಲ. ಆದರೆ ಪರಿಶಿಷ್ಟರಿಗೆ ಸೇರಿದ ಜಾಗದಲ್ಲಿ ಬೇಡ. ಈ ಸರ್ವೇ ನಂಬರನ್ನು ಬಿಟ್ಟು ಬೇರೆ ಕಡೆ ಅನುಮತಿ ನೀಡಲಿ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





