
ಶಿವಮೊಗ್ಗ ಲೈವ್.ಕಾಂ |SHIMOGA NEWS | 4 DECEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆ ಪೆಟ್ರೋಲ್ ಬಂಕ್ಗಳು ಬಂದ್ ಆಗಿವೆ. ಹಾಗಾಗಿ ವಾಹನ ಸವಾರರು ಪೆಟ್ರೋಲ್ಗಾಗಿ ಪರದಾಡುವಂತಾಯಿತು.
ಜನರು ಗುಂಪುಗೂಡುವುದನ್ನು ತಪ್ಪಿಸುವುದು ಮತ್ತು ಅಹಿತಕರ ಘಟನೆಗಳನ್ನು ತಡೆಯಲು ಪೆಟ್ರೋಲ್ ಬಂಕ್ಗಳನ್ನು ಬಂದ್ ಮಾಡಲಾಗಿದೆ.
ಪೆಟ್ರೋಲ್ ಸಿಗದೆ ಸವಾರರ ಪರದಾಟ
ಬಂಕ್ಗಳು ಬಂದ್ ಆಗಿದ್ದರಿಂದ ಪೆಟ್ರೋಲ್ ಸಿಗದೆ ವಾಹನ ಸವಾರರು ಪರದಾಡುವಂತಾಯಿತು. ಒಂದು ಬಂಕ್ನಿಂದ ಮತ್ತೊಂದು ಬಂಕ್ಗೆ ಅಲೆದರೂ ಪೆಟ್ರೋಲ್ ಸಿಗಲಿಲ್ಲ. ಇದರಿಂದ ಸವಾರರು ತೀವ್ರ ಸಂಕಷ್ಟ ಅನುಭವಿಸುಂತಾಯಿತು.
ಪೆಟ್ರೋಲ್ಗಾಗಿ ನಗರ ಬಿಟ್ಟು ಹೊರಗೆ ಹೋದರು
ನಿಷೇಧಾಜ್ಞೆ ಇರುವುದರಿಂದ ಪೆಟ್ರೋಲ್ ಬಂಕ್ಗಳು ಬಂದ್ ಆಗಿವೆ. ಹಾಗಾಗಿ ಶಿವಮೊಗ್ಗ ನಗರದ ಹೊರವಲಯಕ್ಕೆ ತೆರಳಿ ಪೆಟ್ರೋಲ್ ಭರ್ತಿ ಮಾಡಿಸಿಕೊಂಡು ಬರುತ್ತಿರುವುದು ಸಾಮಾನ್ಯವಾಗಿದೆ. ಆಯನೂರು, ಭದ್ರಾವತಿ ಸೇರಿದಂತೆ ಸಿಟಿಯ ಹೊರವಲಯದಲ್ಲಿ ಪೆಟ್ರೋಲ್ ಸಿಗುತ್ತಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






