ಭದ್ರಾವತಿ ಉದ್ಧಾಮ ದೇಗುಲ ಬಳಿ ಚಿರತೆ ಕಾಣಿಸಿದ್ದು ನಿಜವಾ? ವಾಟ್ಸಪ್’ನಲ್ಲಿ ಹರಿದಾಡುತ್ತಿರುವ ಮೆಸೇಜ್ ಸತ್ಯಾನಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 17 ಡಿಸೆಂಬರ್ 2018

ಭದ್ರಾವತಿ ಉದ್ಧಾಮ ಕ್ಷೇತ್ರದ ಬಳಿ ಚಿರತೆ ಕಾಣಿಸಿಕೊಂಡಿದೆ..! ಗಂಗೂರು ರಸ್ತೆಯಲ್ಲಿ ಚಿರತೆ ನೋಡಿ ಬೆಚ್ಚಿಬಿದ್ದ ಜನ..! ಬೈಕ್’ನಲ್ಲಿ ಓಡಾಡುತ್ತಿದ್ದವರು, ಜೀವ ರಕ್ಷಣೆಗಾಗಿ ಮರ ಹತ್ತಿ ತಪ್ಪಿಸಿಕೊಂಡರು..! ಹೀಗಂತಾ ಎರಡು ದಿನದಿಂದ ವಾಟ್ಸಪ್, ಫೇಸ್’ಬುಕ್’ನಲ್ಲಿ ಮೆಸೇಜ್’ಗಳು ಹರಿದಾಡುತ್ತಿವೆ.

ಭದ್ರಾವತಿಯ ಗಂಗೂರು ಗ್ರಾಮದ ಉದ್ಧಾಮ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪ್ರತೀ ದಿನ ಭಕ್ತರು ತಂಡೋಪ ತಂಡವಾಗಿ ಹೋಗಿ ಬರುತ್ತಾರೆ. ದಟ್ಟ ಅರಣ್ಯದ ನಡುವೆ, ಪ್ರಶಾಂತ ವಾತಾವರಣದಲ್ಲಿರುವ ದೇಗುಲದಲ್ಲಿ, ಹುಣ್ಣಿಮೆ ದಿನ ವಿಶೇಷ ಪೂಜೆ, ಹೋಮಗಳಿರುತ್ತವೆ. ಅವತ್ತು ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಇದೇ ದೇವಸ್ಥಾನದ ಬಳಿಯೇ ಚಿರತೆ ಕಾಣಿಸಿಕೊಂಡಿದೆ ಅಂತಾ ವಾಟ್ಸಪ್’ನಲ್ಲಿ ಈಗ ಮೆಸೇಜುಗಳ ಫಾರ್ವರ್ಡ್ ಆಗುತ್ತಿವೆ.

48416437 756741261353963 5746756852973043712 n.jpg? nc cat=106& nc ht=scontent.fblr1 3

ಆದರೆ ಅಸಲಿ ವಿಚಾರವೇ ಬೇರೆ..!

ಚಿರತೆ ಕಾಣಿಸಿಕೊಂಡಿರುವುದು ಉದ್ಧಾಮ ಆಂಜನೇಯ ದೇವಸ್ಥಾನದ ಬಳಿಯಲ್ಲ. ಅಸಲಿಗೆ, ಈ ಫೋಟೊ ಶಿವಮೊಗ್ಗ ಜಿಲ್ಲೆಯದ್ದೇ ಅಲ್ಲ. ಇದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಖಚಿತಪಡಿಸಿದ್ದಾರೆ.

48416677 756741248020631 5883528926872993792 n.jpg? nc cat=103& nc ht=scontent.fblr1 3

ಅಂದಹಾಗೆ, ಚಿರತೆ ಪ್ರತ್ಯಕ್ಷವಾಗಿ, ಜನರು ಭಯಭೀತಿಗೊಂಡು ಮರ ಹತ್ತಿದ್ದ ಫೋಟೊ ಉತ್ತರ ಕರ್ನಾಟಕ ಭಾಗದ್ದು. ಬೆಳಗಾವಿ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ನಡೆದ ಘಟನೆ ಎಂದು ಹೇಳಲಾಗುತ್ತಿದೆ. ಆದರೆ ಭದ್ರಾವತಿ ಉದ್ಧಾಮ ಕ್ಷೇತ್ರದ ರಸ್ತೆಯೆಂದು ವಾಟ್ಸಪ್’ನಲ್ಲಿ ಹರಿದಾಡುತ್ತಿರುವುದರಿಂದ, ಜನ ಆತಂಕಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 17, 2018

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

Leave a Comment