ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ, ಬೇಸರಗೊಂಡಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, ತಾಳ್ಮೆಯ ಹಾದಿ ತುಳಿಯಲು ನಿರ್ಧರಿಸಿದ್ದಾರೆ. ಯಾವುದೇ ಕಾರಣಕ್ಕೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲ ಅಂತಾ ಖಡಕ್ ಆಗಿ ಹೇಳಿದ್ದ ಅವರೀಗ, ಭೂ ಸೇನಾ ನಿಗಮದ ಅಧ್ಯಕ್ಷರಾಗಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಕುತೂಹಲ ಮೂಡಿಸಿತ್ತು ಬೆಂಬಲಿಗರ ಸಭೆ
ಮಿನಿಸ್ಟರ್ ಪಟ್ಟ ಸಿಗದೆ ಬೇಸರಗೊಂಡಿದ್ದ ಸಂಗಮೇಶ್ವರ್, ಬೆಂಬಲಿಗರ ಸಭೆ ನಡೆಸಿ, ಮುಂದಿನ ನಡೆಯ ಕುರಿತು ಪ್ರಕಟಿಸುವುದಾಗಿ ಹೇಳಿದ್ದರು. ಈಗ ಬೆಂಬಲಿಗರ ಸಭೆಯಲ್ಲಿ, ತಮ್ಮ ನಿಲುವು ಪ್ರಕಟಿಸಿದ್ದು, ಭೂ ಸೇನಾ ನಿಗಮದ ಅಧ್ಯಕ್ಷ ಸ್ಥಾನ ವಹಿಸಕೊಳ್ಳುವುದಾಗಿ ಹೇಳಿದ್ದಾರೆ.

ಸಂಗಮೇಶ್ವರ್ ದಿಢೀರ್ ಯು ಟರ್ನ್’ಗೆ ಕಾರಣವೇನು?

ಶಾಸಕ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್, ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಬಾರಿ ಸಂಪುಟ ವಿಸ್ತರಣೆ ಬಗ್ಗೆ ಸಂಗಮೇಶ್ವರ್ ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಸಂಗಮೇಶ್ವರ್ ಅವರ ಹೆಸರಿದ್ದಿದ್ದು ಅವರನ್ನು ಕೆರಳಿಸಿತ್ತು. ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸಿವುದಾಗಿಯೂ ಘೋಷಿಸಿದ್ದರು. ಕೊನೆಗೆ, ವಿಚಾರ ತಿಳಿಯುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಗಮೇಶ್ವರ್ ಅವರೊಂದಿಗೆ ಮಾತನಾಡಿದ್ದಾರೆ. ಸಮಾಧಾನಪಡಿಸಿ, ಭವಿಷ್ಯದಲ್ಲಿ ಸಚಿವ ಸ್ಥಾನದ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






