ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020
ಕಳೆದೊಂದು ವಾರದಿಂದ ನಾಪತ್ತೆ ಆಗಿದ್ದ ತಾಯಿ, ಇಬ್ಬರು ಮಕ್ಕಳು ಹೆಣವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮೂವರ ಶವ ಕೊಳೆತೆ ಸ್ಥಿತಿಯಲ್ಲಿ ಸಿಕ್ಕಿವೆ.
ಭದ್ರಾವತಿ ತಾಲೂಕು ಮಲ್ಲಾಪುರ ಗ್ರಾಮದ ಮಂಜಮ್ಮ (30), ಮಕ್ಕಳಾದ ರಚನಾ, ಯಮುನಾ ಅವರ ಮೃತದೇಹ ಕರೆಯಲ್ಲಿ ಪತ್ತೆಯಾಗಿದೆ. ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ವಾರದ ಹಿಂದೆ ಕಾಣೆಯಾಗಿದ್ದರು
ಡಿಸೆಂಬರ್ 18ರಂದು ಮಂಜಮ್ಮ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬದವರು ಇವರಿಗಾಗಿ ಹುಡುಕಾಟ ನಡೆಸಿದ್ದರು. ಡಿಸೆಂಬರ್ 21ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರಿಗಾಗಿ ಶೋಧ ಕಾರ್ಯ ನಡೆಸಿದ್ದರು.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಕರೆಯಲ್ಲಿ ದುರ್ವಾಸನೆ
ಮೈದೊಳಲು ಮಲ್ಲಾಪುರ ಕೆರೆಯಲ್ಲಿ ಇವತ್ತು ದುರ್ವಾಸನೆ ಬರಲು ಆರಂಭವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಮೂವರ ಮೃತದೇಹಗಳು ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಸಾವಿಗೆ ಕಾರಣವೇನು?
ಮಂಜಮ್ಮ, ಇಬ್ಬರು ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















