NEWS HIGHLIGHTS
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಗುಣಸಾಗರ ಬಳಿ ಆತ್ಮಹತ್ಯೆ ಶರಣಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಜನ ಶತಾಬ್ದಿ ರೈಲಿಗೆ ಸಿಲುಕಿ ಸಾವು
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಜನ ಶತಾಬ್ದಿ ರೈಲಿಗೆ ಸಿಲುಕಿ ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ರೈಲ್ವೆ ಟ್ರ್ಯಾಕ್ ಮೇಲೆ ಪತ್ತೆಯಾಗಿದೆ. ಪರಿಶೀಲನೆ ಬಳಿಕ, ಮೃತದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com