ರಾಜ್ಯದಲ್ಲೇ ಮೊದಲು, ತೀರ್ಥಹಳ್ಳಿಯಲ್ಲಿ ನಿರಂತರ ಪೂರೈಕೆಯಾಗುತ್ತಿದೆ ಕುಡಿಯುವ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019   

ರಾಜ್ಯದಲ್ಲೇ ಮೊದಲ ಬಾರಿಗೆ ತೀರ್ಥಹಳ್ಳಿಯಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೆ ಬಂದಿದೆ. ಯೋಜನೆಯನ್ನು ಇನ್ನಷ್ಟು ಸುಧಾರಣೆಗೊಳಿಸಿ ಪರಿಪೂರ್ಣವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಂದೇಶ್ ಜವಳಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್ ಜವಳಿ, ರಾಜ್ಯದಲ್ಲೇ ಮೊದಲ ಬಾರಿಗೆ ಈ ಯೋಜನೆ ಅನುಷ್ಠಾನಗೊಂಡಿದ್ದು, ಸಣ್ಣಪುಟ್ಟ ದೋಷವಿದ್ದು ಅದನ್ನು ಶೀಘ್ರವೇ ಪರಿಹರಿಸಲಾಗುತ್ತದೆ ಎಂದರು.

FOUR LAKH VIEWS copy

ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಸ ರೂಪ

ಆಧುನಿಕ ಯಂತ್ರೋಪಕರಣಗಳಿಂದ ಪಟ್ಟಣದ ಹೊರವಲಯದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕವನ್ನು ಸುಧಾರಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಸರ್ಕಾರ 1.10 ಕೋಟಿ ರೂ. ಅನುದಾನ ನೀಡಿದೆ. ಇಲ್ಲಿ ತ್ಯಾಜ್ಯವನ್ನು ಗೊಬ್ಬರವನ್ನಾಗಿಸಿ ಮಾರಾಟ ಮಾಡಬಹುದು ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥಶೆಟ್ಟಿ, ವೆಂಕಟೇಶ ಪಟವರ್ಧನ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment