ಕೆಎಸ್ಆರ್‌ಟಿಸಿ ಬಸ್ ಡಿಪೋ ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರಿಂದ ಪ್ರತಿಭಟನೆ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021

ಸಾಗರ ತಾಲೂಕಿನ ಹಲವು ಗ್ರಾಮಗಳಿಗೆ ಹತ್ತು ತಿಂಗಳಿಂದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ ಅವರು ಕೆಎಸ್‍ಆರ್‍ಟಿಸಿ ಡಿಪೋ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹತ್ತು ತಿಂಗಳಿಂದ ಹಳ್ಳಿ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಚಾರ ನಿಲ್ಲಿಸಲಾಗಿದೆ. ಇದರಿಂದ ಜನರು, ವಿದ್ಯಾರ್ಥಿಗಳು ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಬಸ್‍ಗಳ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹಿಂದೆ ಯಾವೆಲ್ಲ ಮಾರ್ಗದಲ್ಲಿ ಬಸ್‍ಗಳು ಸಂಚರಿಸುತ್ತಿದ್ದವೋ ಅದೇ ಮಾರ್ಗದಲ್ಲಿ ಬಸ್ಸುಗಳ ಪುನಾರಂಭ ಮಾಡಬೇಕು ಎಂದು ಹಕ್ರೆ ಮಲ್ಲಿಕಾರ್ಜುನ್ ಒತ್ತಾಯಿಸಿದರು.

ಬಸ್ ಓಡಿಸಲು ಕೂಡಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟವ ತವ್ರಗೊಳಿಸಬೇಕಾಗತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment