ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಹೀಗೆ ಬರುವವರು ಕೋವಿಡ್ ಮಾರ್ಗಸೂಚಿ ಪಾಲಿಸದೆ ಇರುವುದು ಸ್ಥಳೀಯರಲ್ಲಿ ವೈರಸ್ ಭೀತಿ ಸೃಷ್ಟಿಸಿದೆ.
ಲಾಂಚ್ನಲ್ಲಿ ಜನವೋ ಜನ
ಶನಿವಾರ ಮತ್ತು ಭಾನುವಾರ ರಜೆ ಇರುವುದರಿಂದ ರಾಜ್ಯದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಬರುತ್ತಿದ್ದಾರೆ. ಶನಿವಾರ ಭಾರಿ ಸಂಖ್ಯೆಯ ಪ್ರವಾಸಿಗರು ಬಂದಿದ್ದರು. ಬಸ್ಸುಗಳ ಸಂಚಾರ ಸಂಪೂರ್ಣವಾಗಿ ಆರಂಭವಾಗಿಲ್ಲ. ಹಾಗಾಗಿ ಖಾಸಗಿ ವಾಹನಗಳಲ್ಲಿಯೆ ಜನರು ಬರುತ್ತಿದ್ದಾರೆ. ಜನರ ಸಂಖ್ಯೆ ಹೆಚ್ಚಿರುವುದರಿಂದ ಲಾಂಚ್ನಲ್ಲಿ ವಾಹನಗಳನ್ನು ಹತ್ತಿಸುತ್ತಿಲ್ಲ.
ಕೋವಿಡ್ ನಿಯಮ ಗಾಳಿಗೆ
ಇಲ್ಲಿಗೆ ಬರುತ್ತಿರುವ ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಮತ್ತು ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಲಾಂಚ್ನಲ್ಲಿ ಜನದಟ್ಟಣೆ ಹೆಚ್ಚುವುದರಿಂದ ಅಂತರ ಕಾಪಾಡಿಕೊಳ್ಳುವುದು ಅಸಾಧ್ಯವಾಗುತ್ತಿದೆ.
ಸ್ಥಳೀಯರಿಗೆ ಕಷ್ಟ ಕಷ್ಟ
ಲಾಂಚ್ನಲ್ಲಿ ಜನದಟ್ಟಣೆ ಹೆಚ್ಚಿರುವುದರಿಂದ ಸ್ಥಳೀಯರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಕೃಷಿ ಚುಟುವಟಿಕೆಗೆ ಟ್ರಾಕ್ಟರ್ಗಳು ಸೇರಿದಂತೆ ಯಾವುದೆ ವಾಹನಗಳು ಲಾಂಚ್ ಹತ್ತಿಸಲು ಆಗುತ್ತಿಲ್ಲ. ಇದರಿಂದ ರೈತರ ಕೆಲಸಗಳು ವಿಳಂಬವಾಗುತ್ತಿದೆ.
ಇನ್ನು, ಪ್ರವಾಸಿಗರು ಕೋವಿಡ್ ನಿಯಮ ಪಾಲಿಸದೆ ಇರುವುದು ಸ್ಥಳೀಯರಲ್ಲಿ ವೈರಸ್ ಭೀತಿ ಉಂಟು ಮಾಡುತ್ತಿದೆ. ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಗ್ರಾಮ ಪಂಚಾಯಿತಿ ಅಥವಾ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?