ಹೆದರಬೇಡಿ, ನಾವಿದ್ದೇವೆ ಅಂದರು ಡಿಸಿ, ಸಾಗರದ ಗ್ರಾಮದಲ್ಲಿ ಆರೋಗ್ಯ ಇಲಾಖೆ ವಿರುದ್ಧ ಜನರ ಮುನಿಸು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019   

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಂಗನ ಕಾಯಿಲೆಯಿಂದ ತೀವ್ರ ಆತಂಕಕ್ಕೀಡಾಗಿರುವ ಗ್ರಾಮಕ್ಕೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಖುದ್ದಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ, ಎಚ್ಚರದಿಂದ ಇರುವಂತೆ ಸಲಹೆ ನೀಡಿದರು.

FOUR LAKH VIEWS copy

ಸಾಗರ ತಾಲೂಕಿನ ಅರಳಗೋಡಿಗೆ ಜಿಲ್ಲಾಧಿಕಾರಿ ದಯಾನಂದ್ ಭೇಟಿ ನೀಡಿದರು. ಕೆಲಕಾಲ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ, ಆರೋಗ್ಯ ಇಲಾಖೆ ಸೂಕ್ತ ನಿಗಾ ವಹಿಸುತ್ತಿಲ್ಲ ಅಂತಾ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

49844919 2293863860890891 6758758457668534272 n.jpg? nc cat=109& nc ht=scontent.fixe1 1

ನಿಗಾ ವಹಿಸುತ್ತಿಲ್ಲ ಆರೋಗ್ಯ ಇಲಾಖೆ

ಆರೋಗ್ಯ ಇಲಾಖೆ ಸೂಕ್ತ ನಿಗಾ ವಹಿಸುತ್ತಿಲ್ಲ. ಸಾಗರ ಉಪವಿಭಾಗೀಯ ಆಸ್ಪತ್ರೆ ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ನೀಡಬೇಕು. ಅರಳಗೋಡಿನಲ್ಲಿ ಸಹಾಯವಾಣಿ ತೆರೆಯಬೇಕು. ಮಂಗನ ಕಾಯಿಲೆಗೆ ತುತ್ತಾದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ಚಿಕಿತ್ಸೆ ವೆಚ್ಚ ಭರಿಸಬೇಕು ಅಂತಾ ಗ್ರಾಮಸ್ಥರು, ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದರು. ಈ ವೇಳೆ, ಆಕ್ರೋಶಗೊಂಡ ಗ್ರಾಮಸ್ಥರನ್ನು ಜಿಲ್ಲಾಧಿಕಾರಿ ಸಂತೈಸಿದರು.

49707193 2293863510890926 490398987900157952 n.jpg? nc cat=107& nc ht=scontent.fixe1 1

ಸಾಗರದಲ್ಲಿ ಮಹತ್ವದ ಮೀಟಿಂಗ್

ಅರಳಗೋಡು ಭೇಟಿಗೂ ಮೊದಲು ಜಿಲ್ಲಾಧಿಕಾರಿ ಅವರು ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಂತಹ ಪರಿಸ್ಥಿತಿಯಲ್ಲೂ ಸಮಸ್ಯೆ ನಿಭಾಯಿಸಬೇಕು ಅಂತಾ ಡಿಸಿ ಸೂಚಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment