ರವೀಂದ್ರ ನಗರ ಗಣಪತಿ ದೇಗುಲದಲ್ಲಿ ರಾತ್ರಿ ಇಡೀ ವೀಣಾ ಮಹೋತ್ಸವ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JANUARY 2021

ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಅಹೋರಾತ್ರಿ ವೀಣಾ ಮಹೋತ್ಸವ ಆಯೋಜಿಸಲಾಗಿತ್ತು. ಶ್ರೀ ಗುರುಗುಹ ವಾಗ್ಗೇಯ ಪ್ರತಿಷ್ಠಾನ ಟ್ರಸ್ಟ್ ಮತ್ತು ಶ್ರೀ ಗುರುಗುಹ ಸಂಗೀತ ಮಹಾ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶನಿವಾರ ಸಂಜೆ 5.30ರಿಂದ ಇವತ್ತು ಬೆಳಗ್ಗೆ 6 ಗಂಟೆವರೆಗೆ ನಿರಂತರವಾಗಿ ವೀಣಾ ಮಹೋತ್ಸವ ನಡೆಯಿತು. ಕೀರ್ತಿಶೇಷ ವಿದ್ವಾನ್ ಶ್ರೀ ಹೆಚ್.ಆರ್. ಪ್ರಸನ್ನ ವೆಂಕಟೇಶ್‍ ಅವರಿಗೆ ಈ ಮಹೋತ್ಸವವನ್ನು ಸಮರ್ಪಿಸಲಾಯಿತು.

137592627 1703311490058350 5914104392888396178 n.jpg? nc cat=108&ccb=2& nc sid=730e14& nc ohc=Jx0GG1n5tdcAX8zOlfk& nc ht=scontent.fblr1 4

ಶ್ರೀ ಗುರುಗುಹ ಸಂಗೀತ ಮಹಾ ವಿದ್ಯಾಲಯದ 17 ನೇ ವರ್ಷದ ಮಾರ್ಗಶಿರ ರಾಷ್ಟ್ರೀಯ ವೀಣಾ ಮಹೋತ್ಸವ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ನಡೆಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಉಮೇಶ್ ಉದ್ಘಾಟಿಸಿದರು. ಕಾರ್ಪೊರೇಟರ್ ಆರತಿ ಪ್ರಕಾಶ್, ಸರಸ್ವತಿ ಸಂಗೀತ ವಿದ್ಯಾಲಯದ ವಿದುಷಿ ವಿಜಯಲಕ್ಷ್ಮೀ ರಾಘು ಉಪಸ್ಥಿತರಿದ್ದರು. ಭಾರತೀಯ ವಿದ್ಯಾ ಭವನದ ಉಪಾಧ್ಯಕ್ಷ ಎನ್ ದಿವಾಕರರಾವ್ ಅಧ್ಯಕ್ಷತೆ ವಹಿಸಿದ್ದರು.

ಮೈಸೂರಿನ ಆರ್.ಕೆ. ಪದ್ಮನಾಭ, ಬೆಂಗಳೂರಿನ ನಿಟ್ಟೂರು ಶ್ರೀಕಾಂತ್, ಶಿವಮೊಗ್ಗದ ಬಿ.ಕೆ. ವಿಜಯಲಕ್ಷ್ಮೀ ರಾಘು, ಬೆಂಗಳೂರಿನ ಎಂ.ಆರ್. ಮಂಜುಳಾ, ವೈ.ಜಿ. ಶ್ರೀಲತಾ ನಿಶ್ಚಿತ್ ಅಹೋರಾತ್ರಿ ವೀಣಾ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಶಿವಮೊಗ್ಗದ ಪಿ.ಎ. ಅರವಿಂದ ಹೊಳ್ಳ, ಮೈಸೂರಿನ ಪಿ.ಎಸ್. ಶ್ರೀಧರ್, ಬೆಂಗಳೂರಿನ ಪುತ್ತೂರು ನಿಶ್ಚಿತ್, ಬಿ.ಆರ್. ಶ್ರೇಯಸ್ ಮೃದಂಗದಲ್ಲಿ ನುಡಿಸಿದರು.

ಬಾಲ ಮತ್ತು ಯುವ ಕಲಾವಿದರಾದ ವೀರನರಸಿಂಹ ರಾವ್, ನಿತ್ಯಾ ರಾವ್, ಸುಮಾ, ಸಂಧ್ಯಾ, ಶುಭ, ಧನ್ಯ, ಮಹಾಲಕ್ಷ್ಮಿ, ವೀಣಾ, ಉಷಾ, ವೈಷ್ಣವಿ, ಪ್ರತಿಭಾ, ಶ್ರೀಯಾ, ಸಂಜನಾ, ಶಿಲ್ಪಾ, ಸಹನೆ, ಸುರಕ್ಷಾ ಭಾಗವಹಿಸಿದ್ದರು.

ಫೋಟೊ, ಮಾಹಿತಿ : ಮುರಳೀಧರ್. ಹೆಚ್.ಸಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment