ಭದ್ರಾವತಿಯಲ್ಲಿ ಆರ್‌ಎಎಫ್‌ ಬೆಟಾಲಿಯನ್‌ಗೆ ಅಮಿತ್ ಷಾ ಶಂಕುಸ್ಥಾಪನೆ | ವಿಡಿಯೋ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 15 JANUARY 2021

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‍ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅಮಿತ್ ಷಾ, ಭದ್ರಾವತಿಯಲ್ಲಿ ಆರ್‍ಎಎಫ್ ಬೆಟಾಲಿಯನ್ ಸ್ಥಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ.

ಇಲ್ಲಿ 350 ಕೋಟಿ ರೂ. ವೆಚ್ಚದಲ್ಲಿ  ಘಟಕ ನಿರ್ಮಾಣವಾಗಲಿದ್ದು,  ರಾಜ್ಯ ಸರಕಾರ 50 ಎಕರೆ ಜಮೀನು ನೀಡಿದೆ. ಇಲ್ಲಿ ಸುಸಜ್ಜಿತವಾದ ವಸತಿಗೃಹಗಳು, ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ, ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದರ ಪ್ರಯೋಜನ ಸ್ಥಳೀಯರಿಗೂ ದೊರೆಯುವಂತೆ ಮಾಡಲಾಗುವುದು. ಸ್ಥಳೀಯರು ಇಲ್ಲಿನ ಎಲ್ಲಾ ಸೌಲಭ್ಯಗಳ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ,  ಇದೊಂದು ಐತಿಹಾಸಿಕ ದಿನ. ಜಿಲ್ಲಾ  ಸಶಸ್ತ್ರ ಮೀಸಲು ಪಡೆಗೆ ಸೇರಿದ 97 ಎಕರೆ ಪ್ರದೇಶದಲ್ಲಿ ಆರ್‍ಎಎಫ್ ಘಟಕಕ್ಕೆ ರಾಜ್ಯ ಸರ್ಕಾರ 50 ಎಕರೆ ಪ್ರದೇಶ ನೀಡಿದೆ.

ಸಾರಿಗೆ ಸಂಪರ್ಕ ಉತ್ತಮವಾಗಿರುವ ಭದ್ರಾವತಿಯಲ್ಲಿ ಆರ್‍ಎಎಫ್ ಘಟಕ ಸ್ಥಾಪನೆಯಿಂದ  ತುರ್ತು ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಪಡೆಗಳನ್ನು ತರಿಸುವುದು ತಪ್ಪಲಿದೆ. ಇಲ್ಲಿ ಆರಂಭವಾಗಲಿರುವ ಘಟಕ ರಾಜ್ಯದ ಎಲ್ಲಾ ಜಿಲ್ಲೆಗಳು, ಕೇರಳದ ನಾಲ್ಕು, ಗೋವಾದ 2, ಪುದುಚೇರಿ ಮತ್ತು ಲಕ್ಷದ್ವೀಪದ ತಲಾ ಒಂದು ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿದೆ. ತುರ್ತು ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರ್ಯದಲ್ಲಿ ಆರ್‍ಎಎಫ್ ಕೈಜೋಡಿಸಲಿದೆ ಎಂದು ಹೇಳಿದರು.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಶ್ವಥ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಸಂಗಮೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

VIDEO / PHOTOS

137303921 1310255446002539 3975137369266578735 n.jpg? nc cat=108&ccb=2& nc sid=8bfeb9& nc ohc=qgdFcZndT 4AX h48fN& nc ht=scontent.fblr4 3
139111313 1310255379335879 6865739795825310827 n.jpg? nc cat=104&ccb=2& nc sid=8bfeb9& nc ohc=c d8L E7SPYAX OicMi& nc ht=scontent.fblr4 3

138421939 1310255399335877 1740012343245309552 n.jpg? nc cat=108&ccb=2& nc sid=8bfeb9& nc ohc=rVkeQNBktE4AX9yeCnd& nc ht=scontent.fblr4 3

137363292 1310255422669208 3858319274063356864 n.jpg? nc cat=108&ccb=2& nc sid=8bfeb9& nc ohc=Wgjtw6rSTKIAX8HcFNq& nc ht=scontent.fblr4 3

138307703 1310255476002536 8708783393146368987 n.jpg? nc cat=104&ccb=2& nc sid=8bfeb9& nc ohc=yLPJYKiC1ewAX8DVld9& nc ht=scontent.fblr4 3

139198538 1310255496002534 3019893533338195367 n.jpg? nc cat=104&ccb=2& nc sid=8bfeb9& nc ohc=44Wci764rt0AX9OaBCp& nc ht=scontent.fblr4 3

139114839 1310255549335862 3688456357702465783 n.jpg? nc cat=106&ccb=2& nc sid=8bfeb9& nc ohc=OhnVoTkw h8AX9mkv b& nc ht=scontent.fblr4 3

138553751 1310255566002527 3100424417063932019 n.jpg? nc cat=104&ccb=2& nc sid=8bfeb9& nc ohc=l03AwLtA5yMAX8piHBT& nc ht=scontent.fblr4 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment